ಸೆರೆ ಹಿಡಿದಿದ್ದ ಆನೆ ಜೊತೆ ಕಾದಾಟ – ದಸರಾ ಆನೆ ಗೋಪಾಲಸ್ವಾಮಿ ಸಾವು

Public TV
1 Min Read

ಮೈಸೂರು: ದಸರಾ ಮಹೋತ್ಸವದಲ್ಲಿ (Mysuru Dasara) ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ದಾಳಿಯಿಂದ ಸಾವನ್ನಪ್ಪಿದೆ.

ಹುಣಸೂರು (Hunsur) ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ (Elephant Gopalaswamy) ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ. ಇದನ್ನೂ ಓದಿ: ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

ಈಚೆಗಷ್ಟೇ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ತನ್ನ ಶಾಂತ ಸ್ವಭಾವಕ್ಕೆ ಈ ಆನೆ ಜನರ ಪ್ರೀತಿ ಗಳಿಸಿತ್ತು. ಈ ಬಾರಿ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.

ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಒಮ್ಮೆ ಜನದಟ್ಟಣೆ ಹಾಗೂ ಪಟಾಕಿ ಶಬ್ದದಿಂದ ಗೋಪಾಲಸ್ವಾಮಿ ವಿಚಲಿತ ಆಗಿತ್ತು. 14 ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *