ದಸರಾ ಉದ್ಘಾಟನೆಗೆ ಇಲ್ಲ ಸಾರಾ – ಮೂರು ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಜಿಟಿಡಿ

Public TV
1 Min Read

ಮೈಸೂರು: ದಸರಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಅವರನ್ನು ಮೈಸೂರು ಜಿಲ್ಲಾಡಳಿತ ಅಕ್ಷರಶಃ ಮರೆತೇ ಬಿಟ್ಟಿದೆ.

10 ದಿನಗಳ ದಸರಾದ ನಾನಾ ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್‍ಗೆ ಒಂದೇ ಒಂದು ಕಾರ್ಯಕ್ರಮದ ಉದ್ಘಾಟನೆಗೂ ಅವಕಾಶ ಇಲ್ಲ. ಆದರೆ ಜೆಡಿಎಸ್‍ನ ಮತ್ತೊಬ್ಬ ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಮೂರು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಣತಿಯಂತೆ ಜಿಲ್ಲಾಡಳಿತ ಈ ಕಾರ್ಯಕ್ರಮ ಪಟ್ಟಿ ಸಿದ್ಧ ಮಾಡಿದೆ. ದಸರಾ ಕಾರ್ಯಕ್ರಮದಲ್ಲಿ ಜಿಟಿಡಿಗೆ ಆದ್ಯತೆ ಸಿಕ್ಕಿದ್ದು ಸಾ.ರಾ.ಮಹೇಶ್ ಅವರನ್ನು ಸ್ಪಷ್ಟವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಉಸ್ತುವಾರಿ ಸಚಿವರ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಈ ಹಿಂದೆ ಹೇಳಿದ್ದರು.

ಈ ಹೇಳಿಕೆಗೆ ಪೂರಕವಾಗಿ ಸಾ.ರಾ ಮಹೇಶ್‍ರನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ದೂರ ಇಟ್ಟಿದ್ದಾರೆ. ಆದರೆ ಜಿ.ಟಿ.ದೇವೇಗೌಡರ ದಸರಾದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *