ಹುಣಸೂರು ಹನುಮ ಜಯಂತಿ ಪ್ರಕರಣ: ಪರಿಸ್ಥಿತಿ ನಿಯಂತ್ರಣಕ್ಕೆ ಕನಿಷ್ಠ ಬಲ ಪ್ರಯೋಗವಾಯ್ತು ಎಂದು ಡಿಸಿ ಸ್ಪಷ್ಟನೆ

Public TV
1 Min Read

ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ವೇಳೆ ಗಲಭೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಡಳಿತ ಘಟನೆ ಕುರಿತು ಸ್ಪಷ್ಟೀಕರಣ ನೀಡಿದೆ.

ಜಿಲ್ಲಾಧಿಕಾರಿ ಡಿ.ರಂದೀಪ್ ಇಡೀ ಘಟನೆಯ ಸಂಪೂರ್ಣ ವಿವರ ನೀಡಿದ್ದು, ಜಯಂತಿ ಆಚರಣೆಯ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳ ಮಾಹಿತಿ ಬಹಿರಂಗಪಡಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಗೃಹ ಕಾರ್ಯದರ್ಶಿಗಳ ನಡುವಿನ ಪತ್ರವ್ಯವಹಾರದ ಮಾಹಿತಿಯೂ ಬಹಿರಂಗವಾಗಿದೆ.

ಮೆರವಣಿಗೆಗೆ ಅವಕಾಶವೇ ನೀಡಿಲ್ಲ ಅಂತ ಆರೋಪ ಮಾಡೋದು ಸರಿಯಲ್ಲ. ಎಲ್ಲವೂ ಕಾನೂನಿನ ರೀತಿಯಲ್ಲೆ ನಡೆದಿದೆ. ಆದ್ರೆ ಹನುಮ ಜಯಂತಿ ವೇಳೆ ನಿಗದಿತ ಸ್ಥಳದಿಂದ ನಿಗದಿತ ಸಮಯಕ್ಕೆ ಮೆರವಣಿಗೆ ಹೊರಟಿಲ್ಲ. ಪರಿಣಾಮ ಸ್ಥಳದಲ್ಲಿ ಹೆಚ್ಚಿನ ಜನ ಸೇರುವಂತಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಅಲ್ಲಿನ ಉಪವಿಭಾಗಾಧಿಕರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಆಗ ಪೊಲೀಸರು ಕನಿಷ್ಠ ಬಲಪ್ರಯೋಗಿಸಿ ಗುಂಪು ಚದುರಿಸಿದ್ದಾರೆ. ಈ ಎಲ್ಲಾ ಕ್ರಮಗಳನ್ನ ಸಾರ್ವಜನಿಕ ಹಿತಾಸಕ್ತಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ. ರಂದೀಪ್ ಸ್ಪಷ್ಟೀಕರಣ ನೀಡಿದ್ದಾರೆ.

ಈದ್ ಮಿಲಾದ್, ಹನುಮಜಯಂತಿ ಮೆರವಣಿಗೆಗೆ ತೆಗೆದುಕೊಂಡಿದ್ದ ಕ್ರಮಗಳ ಬಗ್ಗೆ ಜಿಲ್ಲಾಡಳಿತ ಮೂರು ದಾಖಲೆಗಳನ್ನ ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ನಂತರ ಹನುಮಜಯಂತಿ ವಿಚಾರವಾಗಿ ಮೇಲ್ಮನವಿ ಸಲ್ಲಿಕೆ ಹಾಗೂ ಅದಕ್ಕೆ ಗೃಹಕಾರ್ಯದರ್ಶಿಗಳಿಂದ ಬಂದ ಉತ್ತರದ ಮಾಹಿತಿಯನ್ನೂ ಬಿಡುಗಡೆ ಮಾಡಿದ್ದು, ದಾಖಲೆಗಳ ಸಮೇತ ಜಿಲ್ಲಾಡಳಿತ ಸ್ಪಷ್ಟೀಕರಣ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *