ಚಾಮುಂಡಿ ದೇವಿ ದರ್ಶನ ಪಡೆದ ಎಸ್.ಟಿ ಸೋಮಶೇಖರ್

Public TV
1 Min Read

ಮೈಸೂರು: ನಗರದ ಚಾಮುಂಡಿಬೆಟ್ಟಕ್ಕೆ ನೂತನ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಆಗಮಿಸಿ ಚಾಮುಂಡಿ ದರ್ಶನ ಪಡೆದ ಎಸ್.ಟಿ ಸೋಮಶೇಖರ್, ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದು, ಇಲಾಖೆ ಅಧಿಕಾರ ವಹಿಸಿಕೊಂಡ ನಂತರವೂ ಟೆಂಪಲ್ ರನ್ ಮಾಡುತ್ತಿದ್ದಾರೆ.

ಇದೆ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್ ಮೇಲೆ ಕೇಸ್ ಇರುವ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಆನಂದ್ ಸಿಂಗ್ ಬಗ್ಗೆ ಸಿಎಂಗೆ ಎಲ್ಲಾ ಗೊತ್ತಿದೆ. ಅವರ ಎಲ್ಲ ವಿಚಾರದ ಬಗ್ಗೆ ಸಿಎಂಗೆ ಮಾಹಿತಿ ಇದೆ. ಮಂತ್ರಿ ಆದ ತಕ್ಷಣ ಪ್ರಕರಣಗಳನ್ನ ಮುಚ್ಚಿಹಾಕಲು ಸಾಧ್ಯವಿಲ್ಲ. ಆ ರೀತಿ ಮುಚ್ಚಿ ಹಾಕಿದ್ರೆ ಅಧಿಕಾರಿಗಳಿಗೆ ತೊಂದರೆ ಆಗುತ್ತೆ ಇದೆಲ್ಲಾ ಸಾಧ್ಯವಾಗೋಲ್ಲ ಬಿಡಿ ಅಂತ ಹೇಳಿದರು.

ಸಚಿವ ಆರ್ ಅಶೋಕ್ ಪುತ್ರನ ಅಪಘಾತ ಪ್ರಕರಣ ವಿಚಾರವಾಗಿ, ಅಪಘಾತ ಪ್ರಕರಣದ ಬಗ್ಗೆ ಅಶೋಕ್ ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ವಿಚಾರದ ನನಗೆ ಬಗ್ಗೆ ಅಷ್ಟಾಗಿ ಮಾಹಿತಿ ತಿಳಿದಿಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡುತ್ತೇನೆ ಅಂತ ಜಾರಿಕೊಳ್ಳುವ ಪ್ರಯತ್ನ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *