ಮುಡಾ ಹಗರಣ – ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರ ಆಸ್ತಿ ಜಪ್ತಿ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತರಾದ ಗಂಗರಾಜು, ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಕುರಿತು ತನಿಖೆ ನಡೆಸಿದ ಇಡಿ, ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರ ಹೆಸರಿನಲ್ಲಿದ್ದ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ

ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸೈಟ್‌ಗಳು ನೋಂದಣಿಯಾಗಿತ್ತು ಎಂದು ಸಹ ಇಡಿ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್‌ ಸಿಲಿಂಡರ್‌ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ

ಮೈಸೂರು ಮುಡಾ ಕಚೇರಿ ಸೇರಿ ಹಲವಡೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಇದನ್ನೂ ಓದಿ: ಟೆಂಪೊ, ಮಿನಿವ್ಯಾನ್, ಬಸ್ ನಡುವೆ ಭೀಕರ ಅಪಘಾತ – 9 ಮಂದಿ ಕಾರ್ಮಿಕರು ಸಾವು

Share This Article