ಮುಕ್ತ ವಿವಿ ಹಗರಣ ಮುಚ್ಚಿ ಹಾಕಲು ಬಸವರಾಯರೆಡ್ಡಿಯಿಂದ ಹಫ್ತಾ ವಸೂಲಿ: ಗೋ ಮಧುಸೂದನ್

Public TV
1 Min Read

ಮೈಸೂರು: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಹಗರಣ ಮುಚ್ಚಿ ಹಾಕಲು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಫ್ತಾ ವಸೂಲಿ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಭ್ರಷ್ಟ ಎಂದು ವರ್ಷದ ಹಿಂದೆ ರಾಯರೆಡ್ಡಿ ಅವರು ಹೇಳಿಕೆ ನೀಡಿದ್ದರು. ಆದರೆ ಈಗ ಇದುವರೆಗೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದ ಆರೋಪ ಮಾಡಿದ ನಂತರವೂ ಸಹ ಕ್ರಮ ಕೈಗೊಂಡಿಲ್ಲ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದ ಅವರು ನನಗೆ ರಾಯರೆಡ್ಡಿ ಅವರು ಹಣ ಪಡೆದು ತೆಪ್ಪಗಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

ಮುಕ್ತ ವಿವಿಯ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮುಖ್ಯಮಂತ್ರಿಗಳು ಮುಂದಾಗುತ್ತಿಲ್ಲ. ಇದಕ್ಕೆ ಕಾರಣ ಜೆಡಿಎಸ್ ವರಿಷ್ಟ ಎಚ್‍ಡಿ ದೇವೇಗೌಡರು ಅವರ ಜೊತೆಗಿನ ಬಾಂಧವ್ಯಕ್ಕಾಗಿ ರಂಗಪ್ಪ ಅವರ ರಕ್ಷಣೆಯನ್ನು ಸಿಎಂ ಮಾಡ್ತಿದ್ದಾರೆ ಎಂದು ಟೀಕಿಸಿದರು.

Share This Article
Leave a Comment

Leave a Reply

Your email address will not be published. Required fields are marked *