ಮೈಸೂರು: ಮನೆ ನಿರ್ಮಿಸಲು ಮಾಡಿದ್ದ ಸಾಲ (Loan) ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ (Soldier) ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯೋಧ. ಅವರು ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಪರದಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸೈಟ್ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್ಗೆ ಉಪನ್ಯಾಸಕಿ ಆತ್ಮಹತ್ಯೆ
15 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ, ಆಗ್ರಾ, ಚೀನಾ ಗಡಿಯಲ್ಲಿ ಚಂದ್ರಶೇಖರ್ ಕರ್ತವ್ಯ ನಿರ್ವಹಿಸಿದ್ದರು. 1 ತಿಂಗಳ ಹಿಂದೆ ಅವರು ರಜೆ ಮೇಲೆ ಮನೆಗೆ ಬಂದಿದ್ದರು. ದೀಪಾವಳಿ ಹಬ್ಬದ ನಂತರ ಕರ್ತವ್ಯಕ್ಕೆ ವಾಪಸ್ಸಾಗ ಬೇಕಿತ್ತು.
ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಂಡನ ಮನೆಯಲ್ಲಿ ಕಿರುಕುಳ ಆರೋಪ – ನದಿಗೆ ಹಾರಿ ಪ್ರಾಣಬಿಟ್ಟ ತಾಯಿ, ಮಗಳು