ಹೋಟೆಲ್‍ನಲ್ಲಿ ತಿಂಡಿಗೆ ಆರ್ಡರ್ ಮಾಡಿ ತಿಂಡಿ ಬರುವಷ್ಟರಲ್ಲಿ ವಿದ್ಯಾರ್ಥಿ ಸಾವು!

Public TV
1 Min Read

ಮೈಸೂರು: ಹೋಟೆಲ್‍ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ಹೃದಯಾಘಾತದಿಂದ ಕೂತಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದ ನಟರಾಜ್ ಎಂಬುವರ ಪುತ್ರ ನಿತಿನ್(25) ಸಾವನ್ನಪ್ಪಿದ ವಿದ್ಯಾರ್ಥಿ. ಈತ ಮೈಸೂರಿನ ವಿದ್ಯಾವರ್ಧಕ ಕಾಲೇಜಿನ ನಾಲ್ಕನೇ ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿಯಾಗಿದ್ದ. ನಿತಿನ್ ತಿಂಡಿ ತಿನ್ನಲು ಸ್ನೇಹಿತನೊಂದಿಗೆ ಹುಣಸೂರು ಪಟ್ಟಣ ಹೋಟೆಲ್‍ಗೆ ತೆರಳಿ ತಿಂಡಿಗೆ ಆರ್ಡರ್ ಮಾಡಿದ್ದಾರೆ. ತಿಂಡಿ ಬರುವಷ್ಟರಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾನೆ.

ಸ್ನೇಹಿತ ಹಾಗೂ ಹೋಟೆಲ್‍ನವರು ಉಪಚರಿಸಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ನಿತಿನ್ ಸಾವನ್ನಪ್ಪಿದ್ದು, ಯುವಕ ಹೋಟೆಲ್‍ನಲ್ಲಿದ್ದ ಕೊನೆ ಕ್ಷಣದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

Share This Article
Leave a Comment

Leave a Reply

Your email address will not be published. Required fields are marked *