ಎಂ.ಪಿ ಪ್ರಕಾಶ್ ಪುತ್ರಿಗೆ ಮಾಜಿ ಶಾಸಕನಿಂದ ಕೊಲೆ ಬೆದರಿಕೆ

Public TV
1 Min Read

ಮೈಸೂರು: ಮಾಜಿ ಮಂತ್ರಿ, ದಿವಂಗತ ಎಂ.ಪಿ ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ ಹಾಕಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ.

ತನಗೆ ಬೆದರಿಕೆ ಹಾಕಿರುವ ಕುರಿತು ಎಂ.ಪಿ ಪ್ರಕಾಶ್ ಪುತ್ರಿ ಸುಮಾ ವಿಜಯ್ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿದ್ದರಾಮಯ್ಯ ಆಪ್ತ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ದೂರಿನಲ್ಲೇನಿದೆ?
ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ ರವೀಂದ್ರ ಹಾಗೂ ಎಚ್.ಪಿ ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದನು. ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್‍ಗೆ ಬಿಟ್ಟುಕೊಟ್ಟಿದ್ದನು. ರವೀಂದ್ರ ಮರಣದ ನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸುಮಾ ಆರೋಪ ಮಾಡಿದ್ದಾರೆ.

ಈಗಾಗಲೇ ಅತಿಕ್ರಮ ಪ್ರವೇಶ ಸಂಬಂಧ ದೂರು- ಪ್ರತಿದೂರು ದಾಖಲು ಮಾಡಿಕೊಳ್ಳಲಾಗಿದ್ದು, ಸುಮಾ ವಿರುದ್ಧ ಎಚ್.ಪಿ. ಮಂಜುನಾಥ್ ಈಗಾಗಲೇ ಅತಿಕ್ರಮ ಪ್ರವೇಶದ ದೂರು ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *