ಬಾಬುರಾವ್ ಚಿಂಚನಸೂರ್ ಅಲ್ಲ, ಚಂಚಲ ಸೂರ: ರವಿಕುಮಾರ್

Public TV
1 Min Read

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Babu Rao Chinchansur) ಅವರು ಚಿಂಚನಸೂರ್ ಅಲ್ಲ. ಅವರು ಚಂಚಲ ಸೂರ ಎಂದು ಬಾಬುರಾವ್ ಚಿಂಚನಸೂರ್ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ (N Ravikumar) ವಾಗ್ದಾಳಿ ನಡೆಸಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಪಕ್ಷ ಎಲ್ಲವನ್ನೂ ಅವರಿಗೆ ನೀಡಿತ್ತು. ನಿಗಮ ಮಂಡಳಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಗೌರವದಿಂದ ನಡೆಸಿಕೊಂಡಿತ್ತು. ಆದರೂ ನಮಗೆ ಅವಮಾನ ಆಗಿದೆ ಎಂದು ಹೇಳಿ ಪಕ್ಷವನ್ನು ತ್ಯಜಿಸಿದರು ಎಂದರು.

ಬಾಬುರಾವ್ ಚಿಂಚನಸೂರ್ ಪಕ್ಷ ತ್ಯಜಿಸಿದ್ದರಿಂದ ಬಿಜೆಪಿಗೆ ಯಾವುದೇ ರೀತಿಯ ಹಾನಿಯಿಲ್ಲ. ಚುನಾವಣೆ ಬಂದಾಗಲೇ ಅವರಿಗೆ ಅವಮಾನ ಆಯಿತಾ? ಇಷ್ಟು ದಿನ ಪಕ್ಷದಲ್ಲಿ ಇದ್ದಾಗ ಅವರಿಗೆ ಏನೂ ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ನಿರ್ನಾಮ ಮಾಡುತ್ತೇನೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನಿದೆ ಎಂಬುದು ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ ನಗರ ಬಿಜೆಪಿ ಟಿಕೆಟ್‍ಗೆ ಫೈಟ್- ಈಶ್ವರಪ್ಪ V/S ಆಯನೂರು ಮಧ್ಯೆ ಜಟಾಪಟಿ

Share This Article
Leave a Comment

Leave a Reply

Your email address will not be published. Required fields are marked *