ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ – 104 ಪುಟಗಳ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

Public TV
1 Min Read

ಬೆಂಗಳೂರು: ಒಳಮೀಸಲಾತಿ (Internal Reservation) ಸಂಬಂಧ ಸರ್ಕಾರ ರಚನೆ ಮಾಡಿದ್ದ ಆಯೋಗ ಇಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಆಯೋಗದ ಅಧ್ಯಕ್ಷ ನ್ಯಾ‌.ನಾಗಮೋಹನದಾಸ್ ಸಿಎಂ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ವರದಿ ಸಲ್ಲಿಕೆ ಮಾಡಿದರು. ಸುಮಾರು 104 ಪುಟಗಳ ವರದಿ ಇದಾಗಿದೆ.

ವರದಿ ಸಲ್ಲಿಕೆ ಬಳಿಕ ಆಯೋಗ ಅಧ್ಯಕ್ಷ ನ್ಯಾ.ನಾಗಮೋಹನದಾಸ್  (Nagamohan Das) ಮಾತನಾಡಿ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ಮಾಡಿ ವರದಿ ಕೊಡಲಾಗಿದೆ. 104 ಪುಟಗಳ ವರದಿ ನೀಡಲಾಗಿದೆ. ಇದು ತರಾತುರಿಯಲ್ಲಿ ಕೊಟ್ಟಿರುವ ವರದಿಯಲ್ಲ, ಸರ್ಕಾರ ವರದಿ ಕೇಳಿರಲಿಲ್ಲ. ನಾವೇ ಸರ್ಕಾರಕ್ಕೆ ಮಧ್ಯಂತರ ವರದಿ ಕೊಟ್ಟಿದ್ದೇವೆ. ಸರ್ಕಾರ ಏನ್ ತೀರ್ಮಾನ ಮಾಡುತ್ತೋ ನೋಡೋಣ ಎಂದರು. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ

ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ವರದಿ ಕೊಡಲಾಗಿದೆ. ಮಧ್ಯಂತರ ವರದಿ ಕೊಟ್ಟಿದ್ದೇನೆ‌. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ. ಮಧ್ಯಂತರ ವರದಿಯಲ್ಲಿ ಏನಿದೆ ಅಂತ ನಾನು ಹೇಳೋಕೆ ಆಗೊಲ್ಲ. ಸರ್ಕಾರ ಏನ್ ಮಾಡುತ್ತೆ ಅಂತ ಸರ್ಕಾರವನ್ನ ಕೇಳಿ ಎಂದರು. ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!

Share This Article