ನಲಪಾಡ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಬಿಜೆಪಿಯಿಂದ ಸುಳ್ಳು ಸುದ್ದಿ ಷಡ್ಯಂತ್ರ: ಸಿದ್ದು ಹಳ್ಳೇಗೌಡ

Public TV
2 Min Read

ಬಳ್ಳಾರಿ: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮತ್ತು ಟೀಂ ನನ್ನ ಮೇಲೆ ಹಲ್ಲೆ ನಡೆಸಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ನಮ್ಮ ನಡುವೆ ಯಾವುದೇ ಜಗಳವಾಗಿಲ್ಲ, ನಾನು ಆರಾಮಾಗಿದ್ದೇನೆ ಎಂದು ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಸ್ಪಷ್ಟಪಡಿಸಿದ್ದಾರೆ.

ವಾಟ್ಸಪ್ ಮೂಲಕ ಬೈಟ್ ಬಿಡುಗಡೆ ಮಾಡಿರುವ ಸಿದ್ದು ಹಳ್ಳೇಗೌಡ, ನಮ್ಮ ನಡುವೆ ಯಾವುದೇ ಜಗಳವಾಗಿಲ್ಲ. ನಾನು ಆರಾಮಾಗಿದ್ದೇನೆ. ಹೊಡೆದಾಟದ ಪೋಟೋ ವೈರಲ್ ಅಗಿರುವುದು ಸುಳ್ಳು. ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧ ಮತ್ತೆ ಹಲ್ಲೆ ಆರೋಪ

ನಲಪಾಡ್ ಹೊಡೆದಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇದು ಬಿಜೆಪಿ ಷಡ್ಯಂತ್ರವಾಗಿದೆ. ನಮ್ಮ ಕುಟುಂಬದ ಸದಸ್ಯರು ಗಾಬರಿಯಾಗಿದ್ದಾರೆ. ಈ ಸಂಬಂಧ ಸುಳ್ಳು ಸುದ್ದಿ ಹರಡುವುನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಬುಧವಾರ ನಲಪಾಡ್ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಗೆಟ್ ಟೂ ಗೆದರ್ ರೀತಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದರು. ಆ ಕ್ಷಣದಲ್ಲಿ ನಾನು ಮುಂದಿನ ಅಧ್ಯಕ್ಷನಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತೇನೆ ಎಂದು ಪ್ರಸ್ತಾಪಿಸಿದರು. ನಂತರ ರಾತ್ರಿ ಯಲಹಂಕದ ಒಂದು ಕ್ಲಬ್‌ನಲ್ಲಿ ಭೋಜನಕ್ಕೆ ಕರೆದಿದ್ದರು. ಈ ವೇಳೆ ನನ್ನನ್ನು ಹಾಗೂ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಗೌಡರವರನ್ನು ಸದಸ್ಯ ಎಂದು ತಿಳಿದು ಸಮಯ ನೋಡಿ, ಏನು ಲೇ ನೀವು ಮಂಜುಗೌಡಗೆ ಸಪೋರ್ಟ್ ಮಾಡುತ್ತೀರಾ ಎಂದು ಹಲ್ಲೆ ನಡೆಸಿದ್ದಾರೆಂದು ಸಿದ್ದು ಹಳ್ಳೇಗೌಡ ಆರೋಪಿಸಿದ್ದಾರೆಂದು ಸುದ್ದಿಯಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ಸಿನ ‘ನಾನು ಹುಡುಗಿ ಹೋರಾಡಬಲ್ಲೆ’ ಪೋಸ್ಟರ್ ಖ್ಯಾತಿಯ ಪ್ರಿಯಾಂಕಾ ಬಿಜೆಪಿಗೆ?

ಹಲ್ಲೆ ವಿಚಾರವಾಗಿ ನನ್ನದೇನೂ ತಪ್ಪು ಇಲ್ಲ. ಹುಡುಗರು ಹುಡುಗರು ಏನೋ ಗಲಾಟೆ ಮಾಡಿಕೊಂಡಿರಬೇಕು. ನಾನು 9 ಗಂಟೆಗೆ ಅಲ್ಲಿಂದ ಹೊರಟು 9-30 ರಿಂದ 9-45 ರ ಸುಮಾರಿಗೆ ಮನೆಗೆ ಬಂದೆ. 11-30ಕ್ಕೆ ಮಲಗಿಕೊಂಡಿದ್ದೇನೆ. ಬೆಳಗ್ಗೆ 6 ಗಂಟೆ ವೇಳೆಗೆ ಈ ವಿಷಯ ನನಗೆ ಗೊತ್ತಾಗಿದೆ. ಬೆಳಗ್ಗೆ ಅವರೇ ಮತ್ತೆ ಮೆಸೇಜ್ ಹಾಕಿದ್ದಾರೆ. ನಲಪಾಡ್‌ದು ಏನೂ ತಪ್ಪು ಇಲ್ಲಾ ಅಂತ. ಇದರಲ್ಲಿ ನನ್ನ ಇನ್ವಾಲ್ ಮೆಂಟ್ ಏನೂ ಇಲ್ಲ ಎಂದು ನಲಪಾಡ್ ಕೂಡ ಸ್ಪಷ್ಟನೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *