ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ

Public TV
1 Min Read

ಹೈದರಾಬಾದ್: ಬಹುಭಾಷಾ ನಟ ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ ಸಿಕ್ಕಿದೆ.

2012ನೇ ಸಾಲಿನ ಚಲನ ಚಿತ್ರ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದ್ದು, ‘ಈಗ’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಅತ್ಯುತ್ತಮ ಖಳ ನಟ ಪ್ರಶಸ್ತಿ ಸಿಕ್ಕಿದೆ. ಈ ಪಟ್ಟಿಯಲ್ಲಿ ಈಗ ಅತ್ಯುತ್ತಮ ಚಿತ್ರ ಪ್ರಶಸ್ತಿ ಸೇರಿದಂತೆ ಒಟ್ಟು 6 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

ಅತ್ಯುತ್ತಮ ನಿರ್ದೇಶನ ಮತ್ತು ಚಿತ್ರಕಥೆ ಸಂಭಾಷಣೆ ವಿಭಾಗದಲ್ಲಿ ರಾಜಮೌಳಿ ಅವರಿಗೆ ಪ್ರಶಸ್ತಿ ಸಿಕ್ಕಿದರೆ, ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ಸೆಂಥಿಲ್ ಕುಮಾರ್ ಅವರಿಗೆ ಪ್ರಶಸ್ತಿ ಸಿಕ್ಕಿದೆ. ಸಂಕಲನ ಮಾಡಿದ್ದಕ್ಕೆ ಎಡಿಟರ್ ವೆಂಕಟೇಶ್ವರ ರಾವ್ ಅವರಿಗೆ ಪ್ರಶಸ್ತಿ ಸಿಕ್ಕಿದೆ.

ತೆಲುಗುವಿನಲ್ಲಿ ಅಭಿನಯಿಸಿದ ಮೊದಲ ಚಿತ್ರದಲ್ಲೇ ಸುದೀಪ್ ಅವರು ‘ನಂದಿ ಪ್ರಶಸ್ತಿ’ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ತೆಲುಗು ನಟ ನಾನಿ ಮತ್ತು ಸಮಂತಾ ನಾಯಕ, ನಾಯಕಿಯಾಗಿ ಅಭಿನಯಿಸಿದ್ದ ‘ಈಗ’ದಲ್ಲಿ ಸುದೀಪ್ ವಿಲನ್ ಆಗಿ ಅಭಿನಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *