ಡಿಕೆಶಿ, ಸಿದ್ದರಾಮಯ್ಯ ಅವರಿಗೆ ಕೆಲಸ ಇಲ್ಲ: ನಾರಾಯಣಗೌಡ

Public TV
1 Min Read

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲಸ ಇಲ್ಲ, ಹೀಗಾಗಿ ಏನೇನೋ ಹೇಳುತ್ತಾರೆ ಎಂದು ರೇಷ್ಮೆ ಹಾಗೂ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಕೆಲಸ ಇಲ್ಲ. ಹೀಗಾಗಿ ಏನೇನೋ ಹೇಳುತ್ತಿರುತ್ತಾರೆ. ಆದರೆ ನಮಗೆ ಮಾಡಲು ತುಂಬಾ ಕೆಲಸ ಇದೆ. ಸರ್ಕಾರ ನಮಗೆ ಜವಾಬ್ಧಾರಿ ಕೊಟ್ಟಿದೆ. ನಾವು ಪುನಾಃ ಕಾಂಗ್ರೆಸ್‍ಗೆ ಹೋಗುವುದಾದರೆ ಅಲ್ಲಿಂದ ಬಿಟ್ಟು ಇಲ್ಲಿಗೆ ಏಕೆ ಬರುತ್ತಿದ್ದೇವು ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ ಸಚಿವ ಡಾ.ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ಖುತುಸ್ರಾವದ ರಕ್ತ ಸೇವಿಸುತ್ತೇನೆ, ಫೇಸ್ ಮಾಸ್ಕ್‌ ಆಗಿ ಬಳಸುತ್ತೇನೆ

ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ಆಗಿರುವ ನಾವೆಲ್ಲರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇಟ್ಟು ಬಿಜೆಪಿಗೆ ಬಂದಿದ್ದೇವೆ. ಯಡಿಯೂರಪ್ಪ ಅವರಿಂದ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಆಗಿದೆ. ಬಿಜೆಪಿಗೆ ಸೇರ್ಪಡೆಯಾಗಿರುವ ಯಾರೊಬ್ಬರೂ ಇತರೆ ಪಕ್ಷಗಳಿಗೆ ಹೋಗುವುದಿಲ್ಲ. ಕಾಂಗ್ರೆಸ್‍ಗೆ ಹೋಗುತ್ತೇವೆ ಎನ್ನುವುದು ಅವರ ಭ್ರಮೆ. ನಾವು ಯಾರ ಸಂಪರ್ಕದಲ್ಲಿ ಇಲ್ಲ. ಆದರೆ ನಮ್ಮನ್ನೆಲ್ಲಾ ದಾರಿ ತಪ್ಪಿಸುವ ಸಲುವಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಮುಂದಿನ ಬಾರಿಯೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ

Share This Article
Leave a Comment

Leave a Reply

Your email address will not be published. Required fields are marked *