ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

By
1 Min Read

ಯಾದಗಿರಿ: ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆ ನಾರಾಯಣಪುರದ ಬಸವಸಾಗರ ಜಲಾಶಯ (Basava Sagara Dam) ಸದ್ಯ ಬಹುತೇಕ ಭರ್ತಿಯಾಗಿದೆ.

33.33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಬರೋಬ್ಬರಿ 22 TMC ನೀರು ಸಂಗ್ರಹವಾಗಿದೆ. 20 ದಿನಗಳ ಹಿಂದೆ ಮೈನಸ್ 1 ಟಿಎಂಸಿ ಡೆಡ್ ಸ್ಟೋರೇಜ್ ದಾಟಿದ್ದ ಜಲಾಶಯದ ಸದ್ಯ ಭರ್ತಿ ಆಗಿರೋದ್ರಿಂದ ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿದೆ. ಇದನ್ನೂ ಓದಿ: ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

ಪ್ರತಿವರ್ಷ ಜೂನ್ 15ಕ್ಕೆ ನಾರಾಯಣಪುರ ಜಲಾಶಯದಿಂದ ಎಡ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದ್ರೆ ಈ ಬಾರಿ 15 ದಿನ ತಡವಾಗಿ ನಾಲೆಗೆ ನೀರು ಹರಿಸಲಾಗಿದೆ. ಆದರೂ ಬೇಸಿಗೆ ಬೆಳೆಗೆ ನೀರು ಸಿಗುವ ವಿಶ್ವಾಸದಲ್ಲಿ ಅನ್ನದಾತರಿದ್ದಾರೆ. ಇದನ್ನೂ ಓದಿ: ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ – ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಆಲಮಟ್ಟಿ ಜಲಾಶಯವೂ ಭರ್ತಿ:
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಾಹ್ದೂರ್‌ ಶಾಸ್ತ್ರಿ ಜಲಾಶಯವೂ (Almatti Dam) ಬಹುತೇಕ ಭರ್ತಿ ಆಗಿದೆ. ಮುಂಗಾರು ಮಳೆ ಕೈ ಕೊಟ್ಟ ಕಾರಣ ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆ ಜನರು ಆತಂಕಕ್ಕೆ ಒಳಗಾಗಿದ್ದರು. ಆದ್ರೆ ತಡವಾಗಿಯಾದರೂ ಜಲಾಶಯ ಭರ್ತಿ ಆಗಿದ್ದಕ್ಕೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್