ಪ್ರಧಾನಿ ಮೋದಿ ಭಾಷಣ ಮಕ್ಕಳಿಗೆ ಉಪಯುಕ್ತವಾಗಿದೆ: ಸಿದ್ದಗಂಗಾ ಶ್ರೀ

Public TV
1 Min Read

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಕುರಿತಾಗಿ ಪ್ಲಾಸ್ಟಿಕ್ ನಿಷೇಧ, ಬಯಲು ಶೌಚ ಮುಕ್ತ, ಜಲ ಸಂರಕ್ಷಣೆ ಕುರಿತು ಮಾತನಾಡಿದ್ದು ತುಂಬಾ ಉಪಯುಕ್ತವಾಗಿದೆ ಎಂದು ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮಿಜಿ ಪ್ರತಿಕ್ರಿಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುವಾರ ಮಠದಲ್ಲಿ ನಡೆದ ಮೋದಿ ಅವರ ಕಾರ್ಯಕ್ರಮ ಯಶಸ್ವಿಯಾಗಿದೆ. ಪ್ರಧಾನಿಯವರೇ ಸ್ವಪ್ರೇರಣೆಯಿಂದ ಬಂದು ಪೂಜ್ಯರ ಗದ್ದುಗೆ ದರ್ಶನ ಪಡೆದಿದ್ದಾರೆ. ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ಪಾಸ್ಟಿಕ್ ನಿಷೇಧ, ಬಯಲು ಶೌಚಾಲಯ ಮುಕ್ತ ಕನಸು, ಜಲಸಂರಕ್ಷಣೆ ಕುರಿತು ಮಾತನಾಡಿದ್ದಾರೆ. ಜೊತೆಗೆ ನಾಡಿನ ಸಂತರು ಮೂರು ಸಂಕಲ್ಪ ತೊಟ್ಟು ದೇಶದ ಬದಲಾವಣೆಗೆ ಶ್ರಮಿಶಬೇಕು ಎಂದು ಕರೆ ಕೊಟ್ಟಿದ್ದಾರೆ ಎಂದರು.

ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಇತ್ತು ಎಂದು ಮಾಧ್ಯಮದಲ್ಲಿ ತಪ್ಪಾಗಿ ಪ್ರಸಾರವಾಗಿತ್ತು. ಪ್ರಧಾನಿ ಕಾರ್ಯಕ್ರಮದ ಪಟ್ಟಿಯಲ್ಲಾಗಲಿ, ಮಠದ ವತಿಯಿಂದಾಗಲಿ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿರಲಿಲ್ಲ. ಹಾಗಾಗಿ ಮಕ್ಕಳೊಂದಿಗೆ ಮಾತಾಡಿಲ್ಲ ಎಂಬ ವಿಚಾರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಸಮಯದ ಅಭಾವ ಇತ್ತು. ಹಾಗಾಗಿ ಚುಟುಕಾಗಿ ಮಾತನಾಡಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ಮಾತನಾಡುವವರಿದ್ದರು. ಸಮಯದ ಅಭಾವದಿಂದ ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೇಬಿ ಶ್ರೀ ಎಂಬ ಬಾಲನಟಿ ಪ್ರಧಾನಿಯವರಿಗೆ ಪ್ರಶ್ನೆ ಕೇಳುವ ಇಂಗಿತ ವ್ಯಕ್ತಡಿಸಿದ್ದು ನಿಜ. ಆದರೆ ನಾವು ಅವರಿಗೆ ಅವಕಾಶ ನೀಡುತ್ತೆವೆ ಎನ್ನುವುದನ್ನು ಖಾತ್ರಿ ಮಾಡಿರಲಿಲ್ಲ. ಪ್ರಶ್ನೆ ಕೇಳುವ ಸಂದರ್ಭ ಬಂದರೇ ಚೀಟಿ ಕೊಟ್ಟರೆ ಅನುಕೂಲ ಮಾಡಿಕೊಡುತ್ತೆ ಎಂದಿದ್ದೆ ಅಷ್ಟೇ ಹೊರತು ಪ್ರತ್ಯೇಕವಾಗಿ ಸಂವಾದ ಕಾರ್ಯಕ್ರಮ ಏರ್ಪಡಿಸಿರಲಿಲ್ಲ ಎಂದು ಒತ್ತಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *