ನರೇಶ್ ಮತ್ತು ಪವಿತ್ರಾ ಲೋಕೇಶ್ ಪ್ರಕರಣ : ಏನಿದು ತೆಲುಗು ಸಿನಿಮಾ ರಂಗದಲ್ಲಿ ಗಾಸಿಪ್

Public TV
1 Min Read

ತೆಲುಗು ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಒಂದೇ ಹೋಟೆಲ್ ನಲ್ಲಿ ಸಿಕ್ಕಿಹಾಕಿಕೊಂಡ ನಂತರ ಪವಿತ್ರಾ ಲೋಕೇಶ್ ಚಿತ್ರಣವೇ ಬದಲಾಗಿದೆ ಎನ್ನುವ ಸುದ್ದಿ ತೆಲುಗು ಸಿನಿಮಾ ರಂಗದಲ್ಲಿ ಹರಡಿದೆ. ತಮ್ಮಿಬ್ಬರ ಮಧ್ಯೆ ಅಂಥದ್ದೂ ಏನೂ ಇಲ್ಲ. ತಾವು ಬರೀ ಜಸ್ಟ್ ಫ್ರೆಂಡ್ಸ್ ಎಂದು ಹೇಳಿಕೊಂಡು ಓಡಾಡುತ್ತಿದ್ದವರು ಮೈಸೂರು ಹೋಟೆಲ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಪವಿತ್ರಾ ಮೇಲಿದ್ದ ಇಮೇಜ್ ಬದಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಪರಿಣಾಮ ಪವಿತ್ರಾ ಅವರನ್ನು ಹಲವು ಸಿನಿಮಾಗಳಿಂದ ಕೈ ಬಿಡಲಾಗುತ್ತಿದೆ ಅಂತೆ.

ತೆಲುಗು ಮತ್ತು ತಮಿಳಿನ ಹಲವು ಸ್ಟಾರ್ ಸಿನಿಮಾಗಳಿಗೆ ಪವಿತ್ರಾ ಲೋಕೇಶ್ ತಾಯಿ ಪಾತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದರಂತೆ. ಆದರೆ, ಈ ಪ್ರಕರಣದ ನಂತರ ಅವರನ್ನು ಕೈ ಬಿಡಲಾಗುತ್ತಿದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ತಾಯಿ ಪಾತ್ರಕ್ಕೆ ಅವರು ಆಯ್ಕೆಯಾಗಿದ್ದರಿಂದ ಹಾಗಾಗಿ ಇಂಥದ್ದೊಂದು ನಿರ್ಧಾರ ತಗೆದುಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ನರೇಶ್, ರಮ್ಯಾ ಮತ್ತು ಪವಿತ್ರಾ ಲೋಕೇಶ್ ಪ್ರಕರಣ ಇದೀಗ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ಇದನ್ನೂ ಓದಿ:ಚಂದ್ರಶೇಖರ್ ಗುರೂಜಿ ಹತ್ಯೆಗೆ ಕಂಬನಿ ಮಿಡಿದ ನಟ ಜಗ್ಗೇಶ್

ಪ್ರಕರಣ ಬೆಂಗಳೂರಿನಿಂದ ಹೈದರಾಬಾದ್ ಗೆ ಶಿಫ್ಟ್ ಆಗುತ್ತಿದ್ದಂತೆಯೇ ರಮ್ಯಾ ಕೂಡ ಅಲ್ಲೊಂದು ಪತ್ರಿಕಾಗೋಷ್ಠಿ ಮಾಡಲು ಸಿದ್ಧತೆ ನಡೆಸಿದ್ದಾರೆ. ರಮ್ಯಾ ಏನಾದರೂ ಮಾಧ್ಯಮಗೋಷ್ಠಿ ಮಾಡಿದರೆ, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಗಲಿದೆ. ದಿನಕ್ಕೊಂದು ರೀತಿಯಲ್ಲಿ ಘಟನೆಯು ತಿರುವುದು ಪಡೆದುಕೊಳ್ಳುತ್ತಿರುವುದು ವಿಶೇಷ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *