ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

Public TV
1 Min Read

ಳೆದೊಂದು ವರ್ಷದಿಂದ ಮಫ್ತಿ (Mufti) ಖ್ಯಾತಿಯ ನಿರ್ದೇಶಕ ನರ್ತನ್ (Nartan) ಕೇವಲ ಸುದ್ದಿಯಾಗಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಅವರು ತಮ್ಮ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನೂ ಹಂಚಿಕೊಳ್ಳುತ್ತಿಲ್ಲ. ಹಾಗಾಗಿಯೇ ಸದಾ ಗಾಸಿಪ್ ಕಾಲಂನಲ್ಲೇ ಉಳಿದುಬಿಟ್ಟಿದ್ದಾರೆ. ಕೆಜಿಎಫ್ 2 (KGF 2) ಸಿನಿಮಾ ಮುಗಿಯುತ್ತಿದ್ದಂತೆಯೇ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿ ಆಯಿತು. ನರ್ತನ್ ಆಗಲಿ, ಯಶ್ ಆಗಲಿ ಖಚಿತ ಪಡಿಸೇ ಇದ್ದರೂ, ಸುದ್ದಿಯಂತೂ ಭರ್ಜರಿ ಸೇಲ್ ಆಯಿತು.

ಕೆಲ ತಿಂಗಳ ಹಿಂದೆಯಷ್ಟೇ ಯಶ್ ಗಾಗಿ ನರ್ತನ್ ಸಿನಿಮಾ ಮಾಡುತ್ತಿಲ್ಲ ಎನ್ನುವ ಸುದ್ದಿ ಹೊರ ಬಿತ್ತು. ನರ್ತನ್ ಮಾಡಿದ ಕಥೆ ಸದ್ಯಕ್ಕೆ ಯಶ್ (Yash) ಗೆ ಒಪ್ಪುತ್ತಿಲ್ಲ. ಹಾಗಾಗಿಯೇ ಕಥೆಯನ್ನು ಯಶ್ ತಿರಸ್ಕರಿಸಿದ್ದಾರೆ ಎಂದು ಗಾಂಧಿನಗರ ಮಾತನಾಡಿಕೊಂಡಿತು. ಈ ಕುರಿತಾಗಿಯೂ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಒಂದೂವರೆ ವರ್ಷದಿಂದ ಯಶ್ ಗಾಗಿಯೇ ಕಥೆ ಬರೆದುಕೊಂಡಿದ್ದ ನರ್ತನ್ ಮುಂದೇನು ಮಾಡುತ್ತಾರೆ ಎನ್ನುವ ಚರ್ಚೆ ಕೂಡ ಶುರುವಾಯಿತು. ಇದೀಗ ಮತ್ತೆ ನರ್ತನ್ ಸುದ್ದಿಯಾಗಿದ್ದಾರೆ. ಇವರ ಸಿನಿಮಾದಲ್ಲಿ ಯಶ್ ಗೆ ಬದಲಾಗಿ ಬೇರೆ ನಟರೊಬ್ಬರು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

ಯಶ್ ಜೊತೆ ನರ್ತನ್ ಸಿನಿಮಾಡುತ್ತಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಇದೀಗ ಯಶ್ ಬದಲಾಗಿ ತೆಲುಗಿನ ರಾಮ್ ಚರಣ್ ತೇಜ ಅವರ ಹೆಸರು ಕೇಳಿ ಬರುತ್ತಿದೆ. ನರ್ತನ್ ಅವರ ಮುಂದಿನ ಸಿನಿಮಾದಲ್ಲಿ ರಾಮ್ ಚರಣ್ ತೇಜ (Ram Charan Teja) ಹೀರೋ ಆಗಿ ನಟಿಸಲಿದ್ದಾರೆ ಎನ್ನುವುದು ಲೆಟೆಸ್ಟ್ ನ್ಯೂಸ್. ದೊಡ್ಡಮಟ್ಟದಲ್ಲಂತೂ ಇದು ಸುದ್ದಿ ಆಗಿದೆ. ಆದರೆ, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದನ್ನು ಅವರಿಬ್ಬರೇ ಹೇಳಬೇಕಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *