ನಟಸಾರ್ವಭೌಮ ಚಿತ್ರತಂಡದಿಂದ ರಾಜ್ಯಾದ್ಯಂತ ವಿಜಯ ಯಾತ್ರೆ

Public TV
1 Min Read

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ‘ನಟಸಾರ್ವಭೌಮ’ ಚಿತ್ರ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡ ರಾಜ್ಯಾದ್ಯಂತ ಸಕ್ಸಸ್ ಯಾತ್ರೆ ಕೈಗೊಂಡಿದೆ.

ಮೈಸೂರು, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭೇಟಿ ಕೊಟ್ಟು ಧನ್ಯವಾದ ಅರ್ಪಿಸಿದ್ದ ಚಿತ್ರತಂಡ, ಮಾರ್ಚ್ 3 ರಂದು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಚಿತ್ರದುರ್ಗ, ಹಿರಿಯೂರು, ಶಿರಾ, ತುಮಕೂರಿನ ಮುಖ್ಯ ಚಿತ್ರಮಂದಿರಗಳಿಗೆ ಭೇಟಿ ಕೊಟ್ಟು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

ನಟಸಾರ್ವಭೌಮ ಸಿನಿಮಾಗೆ ಪವನ್ ಒಡೆಯರ್ ಆಕ್ಷನ್ ಕಟ್ ಹೇಳಿದ್ದು, ರಾಕ್‍ಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಪುನೀತ್‍ಗೆ ನಾಯಕಿಯಾಗಿ ರಚಿತರಾಮ್-ಅನುಪಮಾ ಪರಮೇಶ್ವರ್ ಜೋಡಿಯಾಗಿ ಕಾಣಿಸಿಕೊಂಡು ಸಿನಿರಸಿಕರ ಮನ ಗೆದ್ದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *