ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

Public TV
1 Min Read

ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪಡೆದ ಮಂಸೋರೆ ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. 19.20.21 ಹೆಸರಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟೀಸರ್ ನಾಳೆ ಸಂಜೆ 6 ಗಂಟೆಗೆ ಲಹರಿ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಟೈಟಲ್ ನಿಂದಾಗಿಯೇ ಸಖತ್ ಕುತೂಹಲ ಮೂಡಿಸಿರುವ ಈ ಟೀಸರ್ ನಲ್ಲಿ ಹತ್ತು ಹಲವು ಚರ್ಚಿಸಬೇಕಾದ ವಿಷಯಗಳು ಇರಲಿವೆ ಎನ್ನಲಾಗುತ್ತಿದೆ.

75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು.

ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು. ಇದನ್ನೂ ಓದಿ: ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *