ರಾಷ್ಟ್ರೀಯ ಏಕತಾ ದಿನ- ಮಂಗಳೂರಿಗೆ ಆಗಮಿಸಿದ ಸೈಕಲ್ ರ್‍ಯಾಲಿ

Public TV
1 Min Read

ಮಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಅಕ್ಟೋಬರ್ 31ರಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ಏಕತಾ ದಿನದ ಹಿನ್ನಲೆಯಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್‍ಯಾಲಿ ನಡೆಸಲಾಗುತ್ತಿದೆ.

ಕೇರಳದ ತಿರುವನಂತಪುರಂದಿಂದ ಆರಂಭಗೊಂಡ ಈ ಸೈಕಲ್ ಯಾತ್ರೆ ಗುಜರಾತ್ ಗೆ ತಲುಪಲಿದೆ. ಈ ಯಾತ್ರೆ ಸಾಗುವ ಹಾದಿಯಾದ ಮಂಗಳೂರಿನ ನವಬಂದರಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯ ಹಾಗೂ ಸಿಐಎಸ್‍ಎಫ್ ನ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿದರು. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಶ್ರೀ ರಾಮಾಯಣ ದರ್ಶನಂ, ಪರ್ವ ಕಾದಂಬರಿ ನೀಡಿದ ಸುನಿಲ್ ಕುಮಾರ್

ಸಿಐಎಸ್‍ಎಫ್ ನ ಡೆಪ್ಯೂಟಿ ಕಮಾಂಡೆಂಟ್ ಅಶುತೋಷ್ ಗೌರ್, ಎನ್.ಎಮ್.ಪಿ.ಟಿಯ ಡೆಪ್ಯೂಟಿ ಕಮಾಂಡೆಂಟ್ ಬಿಕ್ರಮ್ ಸೇರಿದಂತೆ ಸಿಐಎಸ್‍ಎಫ್ ನ ಮತ್ತು ಎನ್.ಎಮ್.ಪಿ.ಟಿ ಯ ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *