ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

Public TV
2 Min Read

ಬೆಳಗಾವಿ: ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ನಾಯಕರೊಬ್ಬರಿಗೆ ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಮಾಹಿತಿ ಕೊಡ್ತಿದ್ದೆ ಎಂದು ನವ್ಯಶ್ರೀ ಆರ್. ರಾವ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅತೃಪ್ತ ಶಾಸಕರು ಮುಂಬೈನಲ್ಲಿ ಇದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ನನಗೆ ಮುಂಬೈಗೆ ಹೋಗಲು ಸೀಕ್ರೆಟ್ ಟಾಸ್ಕ್ ನೀಡಿದ್ದರು. ಅದು ಅತೃಪ್ತ ಶಾಸಕರ ಚಲನವಲನ ನೋಡಿಕೊಳ್ಳುವ ಸೀಕ್ರೆಟ್ ಟಾಸ್ಕ್ ಆಗಿತ್ತು. ಅದಕ್ಕಾಗಿ ಬೇರೆ-ಬೇರೆ ಫ್ಲೈಟ್‌ಗಳಿಂದ ಮುಂಬೈಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

ನಾನು ಮುಂಬೈನ ಸುಫಿಯೋಟೆಲ್ ಹೋಟೆಲ್‌ನಲ್ಲಿ ತಂಗಿದ್ದೆ. ನನ್ನ ಜೊತೆ ಮೂವರು ಮಹಿಳೆಯರು ಬಂದಿದ್ದರು. ಹೋಟೆಲ್‌ಗೆ ಹೋಗಿ ಶಾಸಕರ ಚಲನವಲನ ನೋಡಿಕೊಳ್ಳುತ್ತಿದ್ದೆ. ನಂತರ ಕಾಂಗ್ರೆಸ್ ನಾಯಕರಿಗೆ ಅರ್ಧರಾತ್ರಿ ವಾಟ್ಸಪ್ ಮೂಲಕ ಅತೃಪ್ತ ಶಾಸಕರ ಮಾಹಿತಿ ಕೊಡ್ತಿದ್ದೆ. ಆ ಸೀಕ್ರೆಟ್ ಟಾಸ್ಕ್ ನಾನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಮುಂಬೈ ರಹಸ್ಯ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

2023ಕ್ಕೆ ಚುನಾವಣೆಗೆ ನಿಲ್ಲಬೇಕೆಂದಿದ್ದೆ: ನಾನು ದೆಹಲಿಮಟ್ಟದ, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಇರೋದು ನಿಜ. 2023ಕ್ಕೆ ಬೆಳಗಾವಿಯಿಂದ ಚುನಾವಣೆಗೆ ನಿಲ್ಲಬೇಕೆಂದಿದ್ದೆ. ಆದರೆ ಈಗ ರಾಜಕಾರಣ ಹೊರತುಪಡಿಸಿ ವೈಯಕ್ತಿಕ ಬದುಕು ಸರಿಪಡಿಸಿಕೊಳ್ಳಬೇಕಿದೆ. ಈ ಕೃತ್ಯಕ್ಕೆ ಸಹಕಾರ ಕೊಟ್ಟ ಮಹಾನಾಯಕ ಯಾರು ಎಂಬುದನ್ನು ಶೀಘ್ರದಲ್ಲೇ ಹೇಳುತ್ತೇನೆ. ಆತನ ಮುಂದಿನ ಜೀವನ ಮುಳ್ಳಾಗುವಂತೆ ಮಾಡ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನನ್ನನ್ನ ಸಸ್ಪೆಂಡ್ ಮಾಡಲಿ: ಕಾಂಗ್ರೆಸ್ ನಿಂದ ನನ್ನ ಇನ್ನೂ ಸಸ್ಪೆಂಡ್ ಮಾಡುವ ಲೆಟರ್ ಬಂದಿಲ್ಲ. ಬೇಕಾದರೆ ನನ್ನ ಸಸ್ಪೆಂಡ್ ಮಾಡಲಿ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆ ಇದ್ದೇನೆ, ಯಾವ ಪೋಸ್ಟ್ ಅಂತಾ ಹೇಳಲ್ಲ. ಇದನ್ನು ರಾಜಕೀಯವಾಗಿ ತಿರುಚುವ ಉದ್ದೇಶವೂ ನನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *