ಮದುವೆಗೂ ಮುನ್ನ ನಯನತಾರಾ ಮತ್ತು ವಿಘ್ನೇಶ್ ಶಿವನ್ ಟೆಂಪಲ್ ರನ್

Public TV
2 Min Read

ಕ್ಷಿಣ ಭಾರತದ ಕ್ಯೂಟೆಸ್ಟ್ ಜೋಡಿಗಳಲ್ಲಿ ನಟಿ ನಯನತಾರ ಮತ್ತು ವಿಘ್ನೇಶ್ ಶಿವನ್ ಕೂಡ ಒಬ್ಬರು. ಈ ಜೋಡಿ ತಮ್ಮ ಗುರಿಯನ್ನು ಸಾಧಿಸುವವರೆಗೂ ಎಂದಿಗೂ ಹಿಂದೆ ಸರಿಯುವುದಿಲ್ಲ. ಸದ್ಯ ಈ ಮುದ್ದಾದ ಜೋಡಿಯ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೌದು, ವಿಘ್ನೇಶ್ ಶಿವನ್ ಹಾಗೂ ನಯನತಾರಾ ತಿರುಪತಿಗೆ ಭೇಟಿ ನೀಡಿ ತಿಪ್ಪಮ್ಮನ ದರ್ಶನ ಪಡೆದಿದ್ದಾರೆ. ಈ ವೇಳೆ ದೇವಾಲಯದ ಬಳಿ ಇಬ್ಬರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಈ ಫೋಟೋವನ್ನು ಅಭಿಮಾನಿಗಳೊಂದಿಗೆ ವಿಘ್ನೇಶ್ ಶಿವನ್ ಹಂಚಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ವಿಘ್ನೇಶ್ ಶಿವನ್ ಆ್ಯಕ್ಷನ್ ಕಟ್ ಹೇಳಿದ್ದ, ಕಾಮಿಡಿ ಕಮ್ ರೋಮ್ಯಾಂಟಿಕ್ ‘ಕಾತು ವಾಕುಲಾ ರೆಂಡು ಕಾದಲ್’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ವಿಘ್ನೇಶ್ ಶಿವನ್, ನಯನತಾರಾ ಜೊತೆಗೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ದೇವಾಲಯದ ಆವರಣದಲ್ಲಿ ನಯನತಾರಾ ಕೈ ಹಿಡಿದು ವಿಘ್ನೇಶ್ ಶಿವನ್ ಫೋಟೋಗೆ ಮಗುಳುನಗೆ ಬೀರುತ್ತಾ ಪೋಸ್ ನೀಡಿದ್ದಾರೆ. ಇದನ್ನೂ ಓದಿ: ವಿಜಯ್ ಸೇತುಪತಿ ಒಲಿಯುವುದು ನಯನತಾರಾಗಾ ಅಥವಾ ಸಮಂತಗಾ?: ಹೆಚ್ಚಿದ ಕುತೂಹಲ

 

View this post on Instagram

 

A post shared by Vignesh Shivan (@wikkiofficial)

ಈ ಫೋಟೋ ಜೊತೆಗೆ ಸಿನಿಮಾ ಬ್ಲಾಕ್‍ಬಾಸ್ಟರ್ ಆಗಲಿ ಎಂದು ಈ ಮುನ್ನ ತಿರುಪತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೆವು. ಅದರಂತೆ ವೆಂಕಟೇಶ್ವರ ಸ್ವಾಮಿ, ತಿರುಮಲ, ತಿರುಪತಿ, ಏಳುಮಲೈಯಾನ್ ಕೋರಿದ್ದನ್ನು ನೀಡಿದ್ದಾನೆ. ನಿಮ್ಮ ಪ್ರೀತಿ, ಬೆಂಬಲ ಮತ್ತು ಆಶೀರ್ವಾದಕ್ಕೆ ಧನ್ಯವಾದಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಈ ಮುನ್ನ ಶಿರಡಿಗೆ ಭೇಟಿ ನೀಡಿದ್ದ ಈ ಜೋಡಿ ಅಲ್ಲೂ ಕೂಡ ಫೋಟೋ ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ವಿಜಯ್ ಸೇತುಪತಿ, ಸಂದೀಪ್ ಕಿಶನ್ ‘ಮೈಕಲ್’ ಚಿತ್ರದ ಫಸ್ಟ್ ಲುಕ್ ರಿಲೀಸ್

 

View this post on Instagram

 

A post shared by Vignesh Shivan (@wikkiofficial)

ಕಾತು ವಾಕುಲಾ ರೆಂಡು ಕಾದಲ್ ಸಿನಿಮಾದಲ್ಲಿ ಕಾಲಿವುಡ್ ನಟ ವಿಜಯ್ ಸೇತುಪತಿ ನಾಯಕನಾಗಿ ಕಾಣಿಸಿಕೊಂಡಿದ್ದು, ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹಾಗೂ ಟಾಲಿವುಡ್ ಕ್ಯೂಟ್ ನಟಿ ಸಮಂತಾ ರುತ್ ಪ್ರಭು ನಾಯಕಿಯರಾಗಿ ಮಿಂಚಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆ ಹೊಂದಿರುವ ಸಿನಿಮಾವಾಗಿದೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದು, ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣವಿದೆ.

Share This Article
Leave a Comment

Leave a Reply

Your email address will not be published. Required fields are marked *