ಟೆಕ್ಕಿಗಳ ಜೊತೆ ರಾಹುಲ್ ಸಂವಾದಕ್ಕೆ ಆರಂಭದಲ್ಲೇ ಅಡ್ಡಿ..!

Public TV
1 Min Read

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬೆಂಗಳೂರಿನಲ್ಲಿ ನಡೆಯುವ ಸಂವಾದ ಕಾರ್ಯಕ್ರಮಕ್ಕೆ ಆರಂಭದಲ್ಲೇ ಅಡ್ಡಿ ಉಂಟಾಗಿದೆ.

ಹೌದು. ಸೋಮವಾರ ಟೆಕ್ಕಿಗಳ ಜೊತೆ ರಾಹುಲ್ ಗಾಂಧಿಯವರ ಸಂವಾದ ಕಾರ್ಯಕ್ರಮ ನಿಗದಿಯಾಗಿತ್ತು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಬರ್ಡ್ಸ್ ಪಾರ್ಕ್ ನಲ್ಲಿ ಈ ಸಂವಾದಕ್ಕೆ ಪ್ಲಾನ್ ಮಾಡಲಾಗಿತ್ತು. ಆದ್ರೆ ಅಲ್ಲಿನ ಸ್ಥಳೀಯರು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸೂಕ್ಷ್ಮ ಪರಿಸರದಲ್ಲಿ ರಾಜಕೀಯ ಮಾಲೀನ್ಯ ಬೇಡ ಎಂದು ಸ್ಥಳೀಯರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಸ್ಥಳೀಯರ ವಿರೋಧಕ್ಕೆ ರಾಜ್ಯ ಬಿಜೆಪಿ ನಾಯಕರು ಕೂಡ ಸಾಥ್ ನೀಡಿದ್ದಾರೆ. ಸ್ಥಳೀಯರ ವಿರೋಧದಿಂದಾಗಿ ಇದೀಗ ಕಾಂಗ್ರೆಸ್, ರಾಹುಲ್ ಸಂವಾದ ಸ್ಥಳ ಬದಲಾವಣೆ ಮಾಡಿದೆ. ಕೊನೆಗೆ ಮಾನ್ಯತಾ ಟೆಕ್ ಪಾರ್ಕ್ ಬಯಲು ರಂಗಮಂದಿರದಲ್ಲಿ ರಾಹುಲ್ ಸಂವಾದ ನಿಗದಿಯಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಟೆಕ್ಕಿಗಳನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಮಾನ್ಯತಾ ಟೆಕ್ ಪಾರ್ಕ್ ಗೆ ಕೆಲಸಕ್ಕೆಂದು ಬರುತ್ತಾರೆ. ಹೀಗಾಗಿ ಕಾಂಗ್ರೆಸ್ ಅದೇ ಜಾಗವನ್ನು ಆಯ್ಕೆ ಮಾಡಿಕೊಂಡಿತ್ತು. ಆದ್ರೆ ಮಾನ್ಯತಾ ಟೆಕ್ ಪಾರ್ಕ್ ರೆಸಿಡೆನ್ಶಿಯಲ್ ಅಸೋಸಿಯೇಶನ್ ನವರು ಕಾರ್ಯಕ್ರಮದಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ಇಲ್ಲಿ ಸಂವಾದವನ್ನು ಆಯೋಜಿಸಬಾರದು ಕಮಿಷನರ್ ಗೆ ದೂರು ನೀಡಿದ ಬಳಿಕ ಇದೀಗ ಲೊಕೇಶನ್ ಶಿಫ್ಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *