ಚರಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ- ರಕ್ಷಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

Public TV
1 Min Read

ಚಾಮರಾಜನಗರ: ತಾಯಿಯೊಬ್ಬಳು ಆಗ ತಾನೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಕುರಬಗೇರಿಯ ಚರಂಡಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆಯಾಗಿದ್ದು, ಇಂದು ಬೆಳಗ್ಗೆ ಪೌರ ಕಾರ್ಮಿಕರು ಸ್ವಚ್ಛತೆಗೆಂದು ಬಂದಾಗ ಶಿಶುವಿನ ಚೀರಾಟವನ್ನು ಕೇಳಿ ಚರಂಡಿ ಬಳಿ ಹೋಗಿದ್ದಾರೆ. ಈ ವೇಳೆ ಆಗ ತಾನೇ ಜನಿಸಿದ ಹೆಣ್ಣು ಮಗುವನ್ನು ಚರಂಡಿಗೆ ಎಸೆದು ಹೋಗಿರುವುದು ಪತ್ತೆಯಾಗಿದೆ.

ಮಗುವನ್ನು ಕಂಡ ಪೌರಕಾರ್ಮಿಕ ಮಹಿಳೆಯರು ಚರಂಡಿಯಿಂದ ಮಗುವನ್ನು ರಕ್ಷಿಸಿ ಪೋಷಣೆ ಮಾಡಿದ್ದಾರೆ. ಬಳಿಕ ಗುಂಡ್ಲುಪೇಟೆಯ ಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಸಲುವಾಗಿ ಮೈಸೂರಿನ ಚಲುವಾಂಬ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *