ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

Public TV
1 Min Read

ಮೈಸೂರು: ಇಲ್ಲಿನ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಾಡಹಬ್ಬ ದಸಾರ ಇನ್ನೇನು ಕೆಲ ದಿನಗಳಲ್ಲೇ ಆರಂಭವಾಗಲಿದ್ದು, ಮೃಗಾಲಯ ವೀಕ್ಷಕರಿಗೆ ಹೊಸ ಪ್ರಾಣಿಗಳ ದರ್ಶನವಾಗಲಿದೆ.

ತಮಿಳುನಾಡಿನಿಂದ ಹೆಬ್ಬಾವು ಮತ್ತು ಮೊಸಳೆಗಳನ್ನು ತಂದು ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ನಾಲ್ಕು ಇಂಡಿಯನ್ ರಾಕ್ ಪೈಥಾನ್ ಹಾಗೂ ಐದು ಗಾರಿಯಲ್ ಮೊಸಳೆಗಳ ಆಗಮನವಾಗಿದೆ.

ಪ್ರಾಣಿ ವಿನಿಮಯ ಯೋಜನೆಯಡಿ ಈ ಹೊಸ ಪ್ರಾಣಿಗಳ ಆಗಮನವಾಗಿದ್ದು, ಆಗಮಿಸಿದ ಎಲ್ಲಾ ಪ್ರಾಣಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ.

ನಾಡಹಬ್ಬ ದಸರಾ ಉತ್ಸವವನ್ನು ಈ ಬಾರಿಯೂ ಸಾಂಪ್ರದಾಯಿಕ ಮತ್ತು ಹೆಚ್ಚು ಜನಾಕರ್ಷಕವಾಗಿ ಆಚರಿಸಲಾಗುವುದು. ದಸರಾ ಉತ್ಸವ ಸೆಪ್ಟೆಂಬರ್ 21ರಿಂದ 30ರ ವರೆಗೆ ನಡೆಯಲಿದೆ. 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ನೆರವೇರಲಿದೆ. ಜಂಬೂ ಸವಾರಿಯ ದಿನವಾದ 29ರಂದು ಮಧ್ಯಾಹ್ನ 1.15ರಿಂದ 1.43ರೊಳಗೆ ನಂದಿ ಧ್ವಜಕ್ಕೆ ಪೂಜೆ ಮತ್ತು 3.13ರಿಂದ 3.40ರೊಳಗೆ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಅವರಿಗೆ ದಸರಾಗೆ ಆಗಮಿಸಿ ಉದ್ಘಾಟನೆ ನೆರವೇರಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಈಗಾಗಲೇ ಅಧಿಕೃತ ಆಹ್ವಾನ ನೀಡಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *