ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

Public TV
1 Min Read

ಚಿಕ್ಕಬಳ್ಳಾಪುರ: ನೈಟ್ ಕರ್ಪ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿಯ ವೈಟ್ ನಿರ್ವಾಣ ಬೈ ಜಡೆ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಈ ರೆಸಾರ್ಟ್ ನಲ್ಲಿ ತಡರಾತ್ರಿ ಡಿಜೆ ಹಾಕಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್ ಹಾಗೂ ಮೂವರು ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಗೇಟ್ ಗೆ ಬೀಗ ಹಾಕಿದ್ದ ರೆಸಾರ್ಟ್ ಮಾಲೀಕರು ಸಾಕಷ್ಟು ಸಮಯ ಬೀಗ ತೆಗೆದಿಲ್ಲ. ನಂತರ ಗೇಟ್ ಬೀಗ ತೆಗೆದಾಗ ಕೆಲ ಪಾನಮತ್ತ ಯುವಕರು ಹೊರ ಬಂದು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಗೇಟ್ ಬಳಿಯೇ ಪೊಲೀಸರು ಹಾಗೂ ಯುವಕರ ನಡುವೆ ತಳ್ಳಾಟ, ನೂಕಾಟ ಆಗಿದೆ. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

ಈ ವೇಳೆ ಪೊಲೀಸರ ಮೇಲೆಯೇ ಪಾನಮತ್ತ ಯುವಕರ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ಚಿಕ್ಕಬಳ್ಳಾಪುರ ಇನ್ಸ್ಪೆಕ್ಟರ್ ಅವರೊಂದಿಗೆ ಗಲಾಟೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ ಹಾಗೂ ಡಿವೈಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಪಾನಮತ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 3 ಕೋಟಿ ವೆಚ್ಚದ ರಸ್ತೆ ನಿರ್ಮಾಣ, 1 ಕೋಟಿಯ ಯುಜಿಡಿ ಕಾಮಗಾರಿಗೆ ಶೀಘ್ರ ಚಾಲನೆ: ಜಗದೀಶ್ ಶೆಟ್ಟರ್

Share This Article
Leave a Comment

Leave a Reply

Your email address will not be published. Required fields are marked *