ಹೊಸದಾಗಿ ನಿಯೋಜನೆಗೊಂಡ ಪಿಡಿಒಗೆ ಹಾಜರಾತಿ ನೀಡದ ಸಿಬ್ಬಂದಿ

Public TV
1 Min Read

– ಗೋಡೆ ಮೇಲೆಯೇ ಹಾಜರಾತಿ ಬರೆಯುತ್ತಿರುವ ಪಿಡಿಒ

ದಾವಣಗೆರೆ: ಹೊಸದಾಗಿ ನಿಯೋಜನೆಗೊಂಡ ಗ್ರಾಮ ಪಂಚಾಯ್ತಿ ಪಿಡಿಒಗೆ ಅಧ್ಯಕ್ಷರು ಹಾಗೂ ಸಿಬ್ಬಂದಿ ಹಾಜರಾತಿ ಪುಸ್ತಕ ನೀಡದ ಹಿನ್ನೆಲೆಯಲ್ಲಿ ಗೋಡೆಯ ಮೇಲೆಯೇ ಹಾಜರಾತಿ ಬರೆದು ಹೋದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮದಲ್ಲಿ ನಡೆದಿದೆ.

ಈ ಗ್ರಾಮ ಪಂಚಾಯ್ತಿಗೆ ಗೋವರ್ಧನ್ ಎಂಬವರು ಪಿಡಿಒ ಇದ್ದು, ಈಗ ಹೆಚ್ಚುವರಿ ಪಿಡಿಒ ಆಗಿ ಗಾಯತ್ರಿ ಎಂಬವರನ್ನು ನೇಮಕ ಮಾಡಿದ್ದಾರೆ. ಇದರಿಂದ ಹೆಚ್ಚುವರಿಯಾಗಿ ನೇಮಕವಾದ ಪಿಡಿಒ ಅವರನ್ನು ವಿರೋಧಿಸಿ ದೇವಿಕೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.

ಗಾಯತ್ರಿ ಅವರನ್ನು ನೇಮಕ ಮಾಡಿರುವ ಇಒ ಆದೇಶ ಸರಿಯಲ್ಲ. ಕೆಲವೆಡೆ ಅಧಿಕಾರಿಗಳಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಅಂತಹ ಸ್ಥಳದ ಬದಲು ಪಿಡಿಒ ಇರುವಲ್ಲಿ ಮತ್ತೊಬ್ಬರನ್ನು ನಿಯೋಜಿಸಿರುವ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಸದಸ್ಯರು ಆರೋಪಿಸಿದರು.

ಅಲ್ಲದೆ ಮೂರ್ನಾಲ್ಕು ವರ್ಷಗಳ ಹಿಂದೆ ಗಾಯತ್ರಿ ಅವರು ದೇವಿಕೆರೆ ಪಂಚಾಯ್ತಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸರಿಯಾಗಿ ಕಚೇರಿಗೆ ಬಾರದೆ ಜನರ ಕೈಗೂ ಸಿಗದ ಕಾರಣ ಇಲ್ಲಿಂದ ವರ್ಗಾವಣೆ ಮಾಡಲಾಗಿತ್ತು ಈಗ ಮತ್ತೆ ಪಿಡಿಒ ಆಗಿ ಬಂದಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಆರೋಪಿಸಿದ್ದಾರೆ.

ಹೊಸದಾಗಿ ನೇಮಕವಾದ ಪಿಡಿಒ ಗಾಯತ್ರಿ ಯವರು ಗ್ರಾಮ ಪಂಚಾಯತಿಗೆ ಬಂದು ಗೋಡೆಯ ಮೇಲೆ ತಮ್ಮ ಹಾಜರಾತಿ ಯನ್ನು ಬರೆದು ವಾಟ್ಸಾಪ್ ನಲ್ಲಿ ಇಒ ಅವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *