ನವವಿವಾಹಿತೆ ನೇಣಿಗೆ ಶರಣು

Public TV
0 Min Read

ಮೈಸೂರು: ಮದುವೆಯಾದ ಆರು ತಿಂಗಳಲ್ಲೇ ನವವಿವಾಹಿತೆ ನೇಣಿಗೆ ಶರಣಾದ ಘಟನೆ ನಂಜನಗೂಡು ತಾಲೂಕಿನ ಕೆಂಪಿ ಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.

ಕೆಂಪಿ ಸಿದ್ದನಹುಂಡಿ ಗ್ರಾಮದ ಕುಮಾರ್ ಪತ್ನಿ ಅನ್ನಪೂರ್ಣ(21) ಮೃತ ದುರ್ದೈವಿ. 6 ತಿಂಗಳ ಹಿಂದೆ ಮೈಸೂರು ತಾಲೂಕಿನ ದೊಡ್ಡಹುಂಡಿ ಗ್ರಾಮದ ಹತ್ತಿರದ ಸಂಬಂಧಿ ಕುಮಾರ್ ಜೊತೆ ವಿವಾಹವಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಂಜನಗೂಡಿನ ತಹಸೀಲ್ದಾರ್ ಮಹೇಶ್ ಕುಮಾರ್ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಸತೀಶ್ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *