ಮೂರು ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು

By
1 Min Read

ಬೆಂಗಳೂರು: ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಕೃಷ್ಣವೇಣಿ (26) ಸಾವನ್ನಪ್ಪಿರುವ ನವವಿವಾಹಿತೆ. ಮೂರು ತಿಂಗಳ ಹಿಂದಷ್ಟೆ ಕೃಷ್ಣವೇಣಿಯನ್ನ ಕೋಲಾರ (Kolar) ಮೂಲದ ಪೃಥ್ವಿರಾಜ್ (30)ಗೆ ವಿವಾಹ ಮಾಡಿಕೊಡಲಾಗಿತ್ತು. ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ.

ಇದೀಗ ಕೃಷ್ಣವೇಣಿ ಕುಟುಂಬದವರು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ. ಮದುವೆಯಾದ ಎರಡು ತಿಂಗಳಿಗೆ ಕಿರಿಕ್ ಶುರುಮಾಡಿದ್ದ. ಮದುವೆಯಾದ ಮೂರು ತಿಂಗಳಿಗೆ ನಾಲ್ಕೈದು ಬಾರಿ ಜಗಳ ಮಾಡಿ ತವರಿಗೆ ಕಳುಹಿಸಿದ್ದ. ಗುರುವಾರವೂ ಕುಡಿದು ಬಂದು ಗಲಾಟೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದ ವಕೀಲನ ಮೇಲೆ ಮಾಜಿ ಪತ್ನಿಯಿಂದ ಗಂಭೀರ ಆರೋಪ

ಮೃತ ಕೃಷ್ಣವೇಣಿ ಎರಡು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಆಕೆಯ ಪತಿ ಪೃಥ್ವಿರಾಜ್‍ನನ್ನು ಬಂಧಿಸುವಂತೆ ಕಾಡುಗೋಡಿ ಠಾಣೆ ಮುಂದೆ ಕೃಷ್ಣವೇಣಿ ಕುಟುಂಬದವರು ಜಮಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್