ಮುಂದಿನ 10 ವರ್ಷ ನೀರಾವರಿ ದಶಕ – ಬೊಮ್ಮಾಯಿ ಘೋಷಣೆ

Public TV
1 Min Read

ಯಾದಗಿರಿ: ಮುಂದಿನ 10 ವರ್ಷಗಳನ್ನು ನೀರಾವರಿ ದಶಕವೆಂದು (Irrigation Decade) ಘೋಷಿಸಲಾಗುವುದು. ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ.

ಜಿಲ್ಲೆಯ ಕೊಡೇಕಲ್ ಹೊರವಲಯದಲ್ಲಿ 10,863 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 40.66 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶದ ಗುರಿ ಇದ್ದು, ಇದುವರೆಗೆ 30ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸಲಾಗುತ್ತಿದೆ. ಬಾಕಿ ಉಳಿದ 10.66ಲಕ್ಷ ಹೆಕ್ಟೇರ್ ಭೂಮಿಯನ್ನು ನೀರಾವರಿಗೆ ಒಳಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

 

ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನಃಶ್ಚೇತನ ಹಾಗೂ ಆಧುನೀಕರಣ ಯೋಜನೆ ಮತ್ತು ಸ್ಕಾಡಾ ತಂತ್ರಜ್ಞಾನದ ಅಳವಡಿಕೆಯಿಂದಾಗಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ರೈತರ ಜಮೀನುಗಳಿಗೆ ನೀರು ಒದಗಿಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇದನ್ನೂ ಓದಿ: ಹಿಂದಿನ ಸರ್ಕಾರ ನಿರ್ಲಕ್ಷಿಸಿತ್ತು, ನಾವು ಬಂಜಾರ ಸಮುದಾಯವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

ಸ್ಕಾಡಾ ತಂತ್ರಜ್ಞಾನದಿಂದಾಗಿ (SCADA Gate) ಉತ್ತರ ಕರ್ನಾಟಕದ ಬರಪೀಡಿತ ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 4.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ ಅಂದರೆ ಅಚ್ಚುಕಟ್ಟು ಪ್ರದೇಶದ ಕೊನೆಯಂಚಿನ ಈ ರೈತರ ಜಮೀನುಗಳಿಗೆ ಇನ್ಮುಂದೆ ಸಮ ಪ್ರಮಾಣದಲ್ಲಿ ನೀರು ಲಭ್ಯವಾಗಲಿದೆ. ಈ ತಂತ್ರಜ್ಞಾನದಿಂದ ನೀರಿನ ಬಳಕೆಯ ದಕ್ಷತೆ ಶೇ.20ರಷ್ಟು ಹೆಚ್ಚಾಗಲಿದೆ ಎಂದರು.

ಈ ಯೋಜನೆಯು ಇಡೀ ಏಷ್ಯಾ ಖಂಡದಲ್ಲಿಯೇ ದೊಡ್ಡ ಯೋಜನೆಯಾಗಿದೆ. ಈ ರೀತಿಯ ಯೋಜನೆಗಳನ್ನು ಇನ್ಮುಂದೆಯೂ ಕರ್ನಾಟದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಇದನ್ನೂ ಓದಿ: ಹಿಂದಿನ ಸರ್ಕಾರಗಳದ್ದು ಕೇವಲ ವೋಟು ಬ್ಯಾಂಕ್‌ ರಾಜಕಾರಣ, ನಮ್ಮ ಆದ್ಯತೆ ವಿಕಾಸ: ಮೋದಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *