ಭಯೋತ್ಪಾದನೆ ಆರೋಪದಿಂದ ಕುಟುಂಬ ರಕ್ಷಿಸಲು 2.5 ಕೋಟಿ ಲಂಚಕ್ಕೆ ಬೇಡಿಕೆ – NIA ಅಧಿಕಾರಿಯನ್ನೇ ಬಂಧಿಸಿದ ಸಿಬಿಐ

Public TV
2 Min Read

ನವದೆಹಲಿ: ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿದ ಪ್ರಕರಣದಲ್ಲಿ ಕುಟುಂಬವೊಂದನ್ನು ರಕ್ಷಿಸಲು ವ್ಯಕ್ತಿಯೊಬ್ಬರಿಂದ 2.5 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಎನ್‌ಐಎ ಅಧಿಕಾರಿಯೊಬ್ಬರನ್ನು (NIA Officer) ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.

ಭಯೋತ್ಪಾದನೆ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ಸಿಲುಕಿಸುವುದಾಗಿ ಬೆದರಿಸಿ, 2.5 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆಂದು ಆರೋಪಿಸಿ ಪಾಟ್ನಾ ಎನ್‌ಐಎ ಘಟಕದ ಉಪ ಎಸ್ಪಿ ಅಜಯ್ ಪ್ರತಾಪ್ ಸಿಂಗ್ ವಿರುದ್ಧ ರಾಮಯ್ಯ ಕನ್‌ಸ್ಟ್ರಕ್ಷನ್ ಮಾಲೀಕ ರಾಕಿ ಯಾದವ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಎನ್‌ಐಎ ಅಧಿಕಾರಿಯನ್ನ ಸಿಬಿಐ ಬಂಧಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್‌ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಏನಿದು ಪ್ರಕರಣ?
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಳೆದ ಸೆಪ್ಟೆಂಬರ್ 19 ರಂದು ರಾಕಿ ಯಾದವ್‌ಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿತ್ತು. ಬಳಿಕ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪ್ರತಾಪ್‌ ಸಿಂಹ್‌ ಸೆ.26ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿದ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ರಕ್ಷಿಸಬೇಕಾದ್ರೆ 2.5 ಕೋಟಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಕುಟುಂಬದ ಸಲುವಾಗಿ ಒಪ್ಪಿಕೊಂಡಿದ್ದೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಪ್ರತಾಪ್‌ ಸಿಂಗ್‌ ಸೆಪ್ಟೆಂಬರ್ 26 ರಂದು 25 ಲಕ್ಷ ರೂ. ಮುಂಗಡ ಹಣ ಪಾವತಿಸಲು ಯಾದವ್‌ಗೆ ಹೇಳಿದ್ದರು. ಮಧ್ಯವರ್ತಿಯೊಬ್ಬರ ಮೊಬೈಲ್ ಸಂಖ್ಯೆ ಹೊಂದಿರುವ ಕೈಬರಹದ ಟಿಪ್ಪಣಿಯನ್ನು ಅವರಿಗೆ ನೀಡಿದರು. ನಂತರ ಬಿಹಾರದ ಔರಂಗಾಬಾದ್‌ಗೆ ತಲುಪಿ ಮಧ್ಯವರ್ತಿ ಮೂಲಕ ಹಣ ತಲುಪಿಸಿದ್ದರು. ಇದಾದ ಮೇಲೆ ಅಕ್ಟೋಬರ್ 1 ರಂದು ಸಿಂಗ್ ಮತ್ತೆ ಯಾದವ್ ಅವರನ್ನು ಕರೆಸಿ, 70 ಲಕ್ಷ ರೂ.ಗೆ ಬೇಡಿಕೆ ಇಡಲಾಗಿತ್ತು ಎಂದು ಸಿಬಿಐಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – 7 ನಕ್ಸಲರು ಬಲಿ

ದೂರುದಾರ ಯಾದವ್‌ರಿಂದ ಅಕ್ರಮವಾಗಿ 20 ಲಕ್ಷ ರೂ. ವಸೂಲಿ ಮಾಡುತ್ತಿದ್ದಾಗ ಆರೋಪಿ ತನಿಖಾ ಅಧಿಕಾರಿ ಹಾಗೂ ಅವರ ಇಬ್ಬರು ಏಜೆಂಟರು ಸಿಬಿಐ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇಬ್ಬರು ಮಧ್ಯವರ್ತಿ ಆರೋಪಿ ಹಿಮಾಂಶು ಮತ್ತು ರಿತಿಕ್ ಕುಮಾರ್ ಸಿಂಗ್ ಬಂಧಿತರು. ಇದಾದ ಬಳಿಕ ಗಯಾ, ಪಾಟ್ನಾ ಮತ್ತು ವಾರಣಾಸಿಯ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 20 ಲಕ್ಷ ರೂ. ಲಂಚದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಹೇಳಿದೆ. ಇದನ್ನೂ ಓದಿ: ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

Share This Article