ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ: ಖಾದರ್

Public TV
1 Min Read

ಮಂಗಳೂರು: ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ (U>T Khader) ಪ್ರಶ್ನಿಸಿದರು.

ರಾಜ್ಯಾದ್ಯಂತ ಪಿಎಫ್ ಐ (PFI) ಕಾರ್ಯಕರ್ತರ ಬಂಧನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ಧ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ. ಕಾನೂನು ಕೈಗೆತ್ತಿಕೊಳ್ಳುವವರನ್ನ ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ. ಶಾಂತಿ ಸೌಹಾರ್ದದ ವಾತಾವರಣ ಸರ್ಕಾರ ನಿರ್ಮಾಣ ಮಾಡಬೇಕು. ಯಾವುದೇ ತಾರತಮ್ಯ ಮಾಡದೇ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದರು. ಇದನ್ನೂ ಓದಿ: PFI ಮೇಲೆ ದಾಳಿ – ಸಿದ್ದು ಸರ್ಕಾರದಿಂದ ಕೇಸ್‌ ವಾಪಸ್‌, ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ  

ಎಲ್ಲರಿಗೂ ಒಂದೇ ರೀತಿಯ ನ್ಯಾಯ ಕೊಟ್ಟರೆ ಎಲ್ಲರೂ ಬೆಂಬಲಿಸುತ್ತಾರೆ. ನಿರಪರಾಧಿಗಳಿಗೆ ಅನ್ಯಾಯ ಆಗದಿದ್ರೆ ಸರ್ಕಾರವನ್ನ ಎಲ್ಲರೂ ಬೆಂಬಲಿಸುತ್ತಾರೆ. ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: PFI ಕಾರ್ಯಕರ್ತರ ಮೇಲೆ FIR ಇಲ್ಲ – ಏನಿದು PAR? ವಶಕ್ಕೆ ಪಡೆದದ್ದು ಯಾಕೆ?

ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ ಕೊಡುತ್ತದೆ. ತಾರತಮ್ಯ ಮತ್ತು ಅನ್ಯಾಯ ಯಾರಿಗೂ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಅದು ಬಿಟ್ಟು ಈವರೆಗೆ ಯಾರೂ ಈ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವ ಸಂಸ್ಥೆ ಬ್ಯಾನ್ ಮಾಡಬೇಕು ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತೆ. ಆದರೆ ಎಲ್ಲಾ ಸಂಘಟನೆಗೆ ಸಮಾನತೆಯ ಕಾನೂನು ತನ್ನಿ. ದ್ವೇಷಾಧರಿತ ಮತ್ತು ಗಲಭೆ ಸೃಷ್ಟಿಸುವ ಕೆಲಸ ಆಗಿದ್ದರೆ ಎಲ್ಲಾ ಸಂಘಟನೆಗಳಿಗೂ ಒಂದೇ ಕಾನೂನು ತನ್ನಿ ಎಂದು ಖಾದರ್ ಆಗ್ರಹಿಸಿದರು. 

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *