ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಬಾರದು: ನಿಖಿಲ್ ಕುಮಾರಸ್ವಾಮಿ

Public TV
1 Min Read

ರಾಮನಗರ: ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ಅಭಿನಯಿಸಿರುವ ರೈಡರ್ ಸಿನಿಮಾ ರಾಜ್ಯಾದ್ಯಂತ ಡಿಸೆಂಬರ್ 22ರಂದು ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಈ ಸಿನಿಮಾದ ಪ್ರಮೋಷನ್‍ಗಾಗಿ ರಾಮನಗರದ ಶಾನ್ ಚಿತ್ರಮಂದಿರಕ್ಕೆ ನಿಖಿಲ್ ಭೇಟಿ ನೀಡಿದ್ದರು. ಇದನ್ನೂ ಓದಿ: ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 31 ನೇ ತಾರೀಖು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ನಮ್ಮ ಚಿತ್ರರಂಗಕ್ಕೆ ಬಹಳ ದೊಡ್ಡ ಹೊಡೆತ ಬೀಳಲಿದೆ. 31 ನೇ ತಾರೀಖು ಹಲವು ಕನ್ನಡ ಸಿನಿಮಾಗಳು ರಿಲೀಸ್ ಆಗಲಿದ್ದು, ಆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ನಮಗೆ ಮೊದಲ 3 ದಿನದ ಕಲೆಕ್ಷನ್ ಬಹಳ ಮುಖ್ಯ. ಆದರೆ ಆ ದಿನವೇ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರೆ  ಬಂದ್ ಮಾಡಲಿ. ಆದರೆ ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು. ಆ ರೀತಿಯ ಬಂದ್‍ಗೆ ಯಾವುದೇ ಕಾರಣಕ್ಕೂ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅನಾರೋಗ್ಯದಿಂದ ಜಾಮೀನಿನ ಮೇಲೆ ಹೊರಬಂದಿರೋ ಪ್ರಜ್ಞಾ ಸಿಂಗ್‌ರಿಂದ ಕ್ರಿಕೆಟ್, ಡ್ಯಾನ್ಸ್ – ವೀಡಿಯೋ ವೈರಲ್

ಇದೇ ವೇಳೆ ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಡಿಸೆಂಬರ್ 28ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೈಟ್ ಕರ್ಫ್ಯೂ ಮಾಡಿರುವುದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುವುದು ನಿಜ. ಆದರೆ ಜನರ ಆರೋಗ್ಯ ಸಹ ನಮಗೆ ಮುಖ್ಯ. ಹಾಗಾಗಿ ಸರ್ಕಾರದ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

 

Share This Article
Leave a Comment

Leave a Reply

Your email address will not be published. Required fields are marked *