ಮಹಿಳೆಯ ಕಣ್ಣೀರು ಒರೆಸಿದ್ರು ನಿಖಿಲ್ ಕುಮಾರಸ್ವಾಮಿ!

Public TV
1 Min Read

ಮಂಡ್ಯ: ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ನಿಖಿಲ್, ಮಹಿಳೆಯೊಬ್ಬರ ಕಣ್ಣೀರು ಒರೆಸಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ, ಹೆಮ್ಮನಹಳ್ಳಿ ಗ್ರಾಮದಿಂದ ನಿಖಿಲ್ ಪ್ರಚಾರ ಆರಂಭಿಸಿದ್ದಾರೆ. ಆತಗೂರು ಗ್ರಾಮದಲ್ಲಿ ಪದ್ಮಮ್ಮ ಎಂಬವರು, ತಮ್ಮ ಮಕ್ಕಳಿಗೆ ಕೆಲಸವಿಲ್ಲ ಎಂದು ನಿಖಿಲ್ ಮುಂದೆ ಕಣ್ಣೀರು ಹಾಕಿದ್ದಾರೆ. ಆಗ ನಿಖಿಲ್, ಪದ್ಮಮ್ಮ ಅವರ ಕಣ್ಣೀರು ಒರೆಸಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ನಾನು ನಿಮ್ಮ ಮಗನಿದ್ದಂತೆ, ನಿಮ್ಮ ಮಕ್ಕಳಿಗೂ ಅಣ್ಣ-ತಮ್ಮನಂತೆ ನಾನಿದ್ದೇನೆ. ಉದ್ಯೋಗ ಸೃಷ್ಟಿ ಮಾಡುವ ವಿಷಯದ ಬಗ್ಗೆ ಬಹಳ ಸೂಕ್ಷ್ಮವಾಗಿ ಗಮನಿಸಿ ಮಾಡುತ್ತೇನೆ ಎಂದು ಮಹಿಳೆಯನ್ನು ಸಮಾಧಾನಪಡಿಸಿದ್ದಾರೆ.

ನಾನು ನಿಮ್ಮ ಋಣ ತೀರಿಸಲು ಈ ರೀತಿ ಮಾಡುತ್ತಿದ್ದೇನೆ. ಲೋಕಸಭಾ ಸದಸ್ಯನಾಗಿ ಮೆರೆಸುವುದಕ್ಕೆ ನನ್ನ ತಂದೆ ಮಾಡುತ್ತಿಲ್ಲ. ನನ್ನ ಸ್ವಾರ್ಥಕ್ಕೆ ನಾನು ಬರುತ್ತಿಲ್ಲ. ನನಗೆ ಒಂದು ಅವಕಾಶ ಕೊಡಿ. ನೀವು ಮತದಾನ ಪ್ರಭುಗಳು. ನೀವು ಏನೂ ಬೇಕಾದರೂ ಕೇಳುವ ಹಕ್ಕು ನಿಮಗಿದೆ. ನಾನು ನಿಮ್ಮ ಮನೆ ಮಗ. ಕುಮಾರಸ್ವಾಮಿ ಹಾಗೂ ದೇವೇಗೌಡರು ನಿಮ್ಮ ಪರವಾಗಿ ನಿಂತಿದ್ದಾರಾ ಅಥವಾ ಬೇರೆ ವ್ಯಾಮೋಹಕ್ಕೆ ಒಳಗಾಗಿದ್ದಾರಾಂತ ನೀವೇ ಯೋಚಿಸಿ ಎಂದು ಹೇಳಿದ್ದಾರೆ.

ನಿಖಿಲ್ ಇಂದು ಮದ್ದೂರಿನ ಹೆಮ್ಮನಹಳ್ಳಿ, ಕದಲೂರು, ಆತಗೂರು, ತೊರೆಶೆಟ್ಟಹಳ್ಳಿ, ಕೆಸ್ತೂರು, ದುಂಡನಹಳ್ಳಿ, ದೊಡ್ಡ ಅಂಕನಹಳ್ಳಿಯಲ್ಲಿ ಅಬ್ಬರದ ಪ್ರಚಾರ ಹಾಗೂ ರೋಡ್‍ಶೋ ನಡೆಸುತ್ತಿದ್ದಾರೆ. ಈ ವೇಳೆ ನಿಖಿಲ್‍ಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸೇರಿ ಸ್ಥಳೀಯ ಜೆಡಿಎಸ್ ನಾಯಕರು ಸಾಥ್ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *