ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

By
1 Min Read

ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್‌ಗೆ (Nipah Virus In Kerala) ಇಬ್ಬರು ಮೃತಪಟ್ಟ ನಂತರ ರಾಜ್ಯ ಸರ್ಕಾರ ಫುಲ್‌ ಅಲರ್ಟ್‌ ಆಗಿದೆ. ರಾಜ್ಯದ ಕೇರಳ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸೂಚಿಸಿದೆ.

ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲಾಗುತ್ತಿದೆ. ಗೂಡ್ಸ್‌ ವಾಹನಗಳಿಗೆ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ತಪಾಸಣೆ ಬಳಿಕವೇ ವಾಹನಗಳನ್ನ ರಾಜ್ಯ ಪ್ರವೇಶಕ್ಕೆ ಬಿಡಲಾಗುತ್ತಿದೆ. ಜೊತೆಗೆ ರೋಗ ಲಕ್ಷಣ ಉಳ್ಳವರ ಟ್ರಾವೆಲ್‌ ಹಿಸ್ಟರಿಯನ್ನೂ ಕಲೆಹಾಕಲಾಗುತ್ತಿದೆ.

ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಗಗನ್, ಧನಂಜಯ್, ಚೈತ್ರಾ ಕುಂದಾಪುರ ಪರಿಚಯವಾಗಿದ್ದು ಹೇಗೆ?: ಡೀಲ್ ಕೇಸ್‍ನ ಸಂಪೂರ್ಣ ಕಥೆ ಬಿಚ್ಚಿಟ್ಟ ಚನ್ನನಾಯ್ಕ್

ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ 5 ಹಾಸಿಗೆಗಳ ವಿಶೇಷ ಐಸೊಲೇಷನ್‌ ವಾರ್ಡ್‌ ಅನ್ನು ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: MLA ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಪ್ರಕರಣದ 5ನೇ ಆರೋಪಿ ಅರೆಸ್ಟ್‌ 

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್