ತಿರುಪತಿ ಗರ್ಭಗುಡಿ 8 ತಿಂಗಳು ಬಂದ್ ಇಲ್ಲ – ಮುಖ್ಯ ಅರ್ಚಕರ ಸ್ಪಷನೆ

Public TV
1 Min Read

ಅಮರಾವತಿ: ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ (TTD) ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದ್ರೆ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ ದೀಕ್ಷಿತುಲು (enugopal Dikshitulu) ಅವರು ಸ್ಪಷ್ಟನೆ ನೀಡಿದ್ದಾರೆ.

ಗರ್ಭಗುಡಿ ಗೋಪುರಕ್ಕೆ ಚಿನ್ನದ ಲೇಪನ (Gold Painting) ಕಾರ್ಯ ನಡೆದರೂ ತಿಮ್ಮಪ್ಪನ ಮೂಲ ವಿರಾಟ ಮೂರ್ತಿಯ ದರ್ಶನ ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫಾರ್ಮ್ ಹೌಸ್‌ನಲ್ಲಿ ವನ್ಯ ಜೀವಿಗಳ ಪತ್ತೆ ಪ್ರಕರಣ- ನಿರೀಕ್ಷಣಾ ಜಾಮೀನು ಕೋರಿದ ಎಸ್‌ಎಸ್ ಮಲ್ಲಿಕಾರ್ಜುನ್

ಮಾರ್ಚ್ 1 ರಿಂದ ಚಿನ್ನದ ಲೇಪನ ಕಾರ್ಯ ಆರಂಭವಾಗಲಿದೆ. ಚಿನ್ನ ಲೇಪನಕ್ಕೆ 6 ತಿಂಗಳು ಸಮಯ ಬೇಕಾಗಲಿದೆ. ಇದಕ್ಕೂ 1 ವಾರ ಮುನ್ನ ದೇಗುಲದ ಪಕ್ಕದಲ್ಲೇ (ತಾತ್ಕಾಲಿಕ ಮಂದಿರ) ನಿರ್ಮಿಸಿ ಅಲ್ಲಿ ವೆಂಕಟೇಶ್ವರನ ಪ್ರತಿಕೃತಿ ಇರಿಸಲಾಗುತ್ತದೆ. ಈ 6 ತಿಂಗಳೂ ಮೂಲ ಮೂರ್ತಿಯ ದರ್ಶನ ಭಕ್ತರಿಗೆ ಲಭ್ಯವಿರುತ್ತದೆ. ಆದರೆ ಸುಪ್ರಭಾತದಿಂದ ಏಕಾಂತ ಸೇವೆವರೆಗಿನ ಸೇವೆಗಳನ್ನು ಏಕನಾಥಂನಲ್ಲಿ ಮಾಡಲಾಗುತ್ತದೆ ಎಂದಿದ್ದಾರೆ.

ಕಲ್ಯಾಣೋತ್ಸವದಂಥ ಅರಿಜಿತ ಸೇವೆಯನ್ನು ಉತ್ಸವಮೂರ್ತಿಗಳಿಗೆ ಮಾಡಲಾಗುತ್ತದೆ. ಗರ್ಭಗುಡಿ ಮುಚ್ಚುತ್ತದೆ. ಆದ್ದರಿಂದ ಗರ್ಭಗೂಡಿ ಲೇಪನ ಕಾರ್ಯ ನಡೆಯುತ್ತಿದ್ದರೂ ವಿರಾಟ ಮೂರ್ತಿಯ ದರ್ಶನ ಭಕ್ತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿಕೆಟ್‍ಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮರ- ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭುಗಿಲೆದ್ದ ಆಕ್ರೋಶ

1957-58ರಲ್ಲಿ ಹಾಗೂ 2018ರಲ್ಲೂ ಚಿನ್ನದ ಲೇಪನ ಕಾರ್ಯ ಯಾವುದೇ ಅಡೆತಡೆಗಳಿಲ್ಲದೇ ನಡೆದಿದೆ. ಈ ಬಾರಿಯೂ ಚಿನ್ನದ ಲೇಪನ ಕಾರ್ಯ ಮುಕ್ತವಾಗಿ ನಡೆಯಲಿದೆ. ಭಕ್ತರು ಎಂದಿನಂತೆ ದರ್ಶನ ಪಡೆದುಕೊಳ್ಳಬಹುದಾಗಿದೆ ಎಂದು ಮುಖ್ಯ ಅರ್ಚಕರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *