ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

Public TV
1 Min Read

ಬೆಂಗಳೂರು: ನಿಗಮ-ಮಂಡಳಿಯಲ್ಲಿ (Corporation Board) ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ (Randeep Surjewala) ಹೈಕಮಾಂಡ್ ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದರು. ಇದನ್ನೂ ಓದಿ: ಕೃಷ್ಣ ಭೈರೇಗೌಡರ ಆರೋಪ ತನಿಖೆಯಾಗುವ ತನಕ ಸದನಕ್ಕೆ ಹೋಗಲ್ಲ: ಬಿ.ಆರ್ ಪಾಟೀಲ್

ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಇಲ್ಲ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತೆಗೆದುಕೊಂಡು ಸ್ಪರ್ಧೆ ಮಾಡಿದವರಿಗೂ ನಿಗಮ-ಮಂಡಳಿ ಸ್ಥಾನ ಇಲ್ಲ ಎಂದರು. ಮೊದಲ ಹಂತದಲ್ಲಿ ಶಾಸಕರಿಗೆ ಕೊಡಲಾಗುತ್ತದೆ. ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ಕೊಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಆರ್ ಪಾಟೀಲ್ ಎಮೋಷನಲ್ ಆಗಿ ಪತ್ರ ಬರೆದಿರಬಹುದು: ಎಂ.ಬಿ ಪಾಟೀಲ್

Share This Article