ನಮ್ಮ ಮೆಟ್ರೋದಲ್ಲಿ ಹಿಂದಿ ಬಳಸಲ್ಲ- ಮೋದಿ ಸರ್ಕಾರಕ್ಕೆ ಸಿಎಂ ಪತ್ರ

Public TV
1 Min Read

ಬೆಂಗಳೂರು: ಕನ್ನಡ ಧ್ವಜದ ವಿಚಾರದ ಮುಂದಿಟ್ಟು ಬಿಜೆಪಿಯನ್ನ ಇಕ್ಕಟ್ಟಿಗೆ ಸಿಲುಕಿಸಿದ್ದ ಸಿಎಂ, ಇದೀಗ ಮತ್ತೊಮ್ಮೆ ಕನ್ನಡ ಪರ ನಿಲುವು ತಳೆದಿದ್ದಾರೆ. ಮೆಟ್ರೋದಲ್ಲಿ ಹಿಂದಿ ಬಳಕೆಗೆ ವಿರೋಧ ವ್ಯಕ್ತಪಡಿಸಿರುವ ಸಿಎಂ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಬಿಜೆಪಿಯನ್ನ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಮ್ಮ ಮೆಟ್ರೋದಲ್ಲಿ ಹಿಂದಿ ಬಳಕೆ ತೆರವಿಗೆ ನಿರ್ಧರಿಸಿರುವ ಸಿಎಂ, ಬಿಎಂಆರ್‍ಸಿಎಲ್ ಗೆ ಹಿಂದಿ ತೆರವಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಪತ್ರ ಬರೆದು, ಮೆಟ್ರೋದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವ ಹೆಚ್ಚಿದೆ. ಕೇಂದ್ರದ ನೆರವಿದ್ದರೂ ಮೆಟ್ರೋದ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದೆ. ಹೀಗಾಗಿ ಇಲ್ಲಿ ತ್ರಿಭಾಷಾ ಸೂತ್ರ ಅನ್ವಯ ಸರಿಯಲ್ಲ ಎಂದು ಬರೆದಿದ್ದಾರೆ.

ರಾಜ್ಯದಲ್ಲಿ ಹಿಂದಿ ಬಳಕೆಗೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಜನರ ಭಾವನೆಗಳಿಗೆ ಸರ್ಕಾರ ಸ್ಪಂದಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಹಿಂದಿ ಬಳಕೆ ನಿಲ್ಲಿಸುವಂತೆ ಬಿಎಂಆರ್‍ಸಿಎಲ್ ಗೆ ಸೂಚನೆ ನೀಡಿದ್ದೇವೆ ಅಂತಾ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‍ಗೆ ಸಿಎಂ ಪತ್ರ ಬರೆದಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *