ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಿದ್ದರಾಮಯ್ಯ

Public TV
1 Min Read

ಹುಬ್ಬಳ್ಳಿ: ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ. ಕಳೆದ ಬಜೆಟ್‍ನಲ್ಲಿಯೇ ಸಾಕಷ್ಟು ಅನುದಾನವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದಂತೆ ಅನೇಕ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿದ್ದೇವೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ನಾವು ಅಖಂಡ ಕರ್ನಾಟಕದಲ್ಲಿದ್ದೇವೆ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಚಿಂತನೆ ನಡೆಯಲಿ ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವುದೇ ಒತ್ತಡ ಇಲ್ಲದೆ ಸರ್ಕಾರ ನಡೆಸುತ್ತಿದ್ದಾರೆ. ಕಣ್ಣೀರು ಹಾಕಿರೋದಕ್ಕೆ ಈಗಾಲೇ ಅವರೇ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳಿಗೆ ಸರ್ಕಾರ ನಡೆಸಲು ಯಾವುದೇ ಒತ್ತಡ ಇಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *