ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್

Public TV
1 Min Read

ರಾಮನಗರ: ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಾರೆ ಹಾಗೂ ರಾಮನಗರ (Ramanagara) ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ವಿಚಾರಕ್ಕೆ ಸ್ವತಃ ಸಂಸದ ಡಿಕೆ ಸುರೇಶ್ (DK Suresh) ತೆರೆ ಎಳೆದಿದ್ದಾರೆ. ನನಗೆ ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ. ಲೋಕಸಭಾ ಸದಸ್ಯನಾಗಿ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿದೆ ಎಂದಿದ್ದಾರೆ.

ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರ್ಚೆ ಆಗುತ್ತಿರುವುದು ಕೇವಲ ಮಾಧ್ಯಮಗಳಲ್ಲಿ ಮಾತ್ರ. ನಾನು ಸದ್ಯಕ್ಕೆ ಲೋಕಸಭಾ ಸದಸ್ಯ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ, ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಈ ಚರ್ಚೆ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ನನಗೆ ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ

ಸದ್ಯ ನಾನು ಲೋಕಸಭಾ ಸದಸ್ಯ ಆಗಿದ್ದೇನೆ. ನನಗೆ ಹಲವು ಕಡೆ ಆಹ್ವಾನ ಇರುವುದು ಸತ್ಯ. 4-5 ಕ್ಷೇತ್ರಗಳಲ್ಲಿ ನನಗೆ ಆಹ್ವಾನ ಮಾಡುತ್ತಿದ್ದಾರೆ. ಆದರೆ ನಾನು ಜವಬ್ದಾರಿ ಸ್ಥಾನದಲ್ಲಿ ಇರುವುದರಿಂದ ಬಿಟ್ಟು ಹೋಗಲು ಸಾಧ್ಯವಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ಹೈಕಮಾಂಡ್ ಅನ್ನೇ ಕೇಳಿ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ಟಾಪ್ ಲೀಡರ್‌ಗಳ ಮೇಲೆ ಟಾರ್ಗೆಟ್ ಮಾಡುವುದು ಸಹಜ: ಸತೀಶ್ ಜಾರಕಿಹೊಳಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *