ಅಯೋಧ್ಯೆಯಲ್ಲಿ ಇನ್ಮುಂದೆ ಕರ್ಫ್ಯೂ ಇರೋದಿಲ್ಲ, ಗುಂಡಿನ ಸದ್ದು ಕೇಳೋದಿಲ್ಲ: ಯೋಗಿ ಆದಿತ್ಯನಾಥ್

Public TV
1 Min Read

– ಬಾಲರಾಮ ಪ್ರತಿಷ್ಠಾಪನೆಯು ರಾಮ ರಾಜ್ಯದ ಗುರುತು ಎಂದ ಸಿಎಂ

ಅಯೋಧ್ಯೆ: ಇಲ್ಲಿನ ಬೀದಿಗಳಲ್ಲಿ ಇನ್ಮುಂದೆ ಬಂದೂಕು ಸದ್ದು ಮಾಡುವುದಿಲ್ಲ, ಕರ್ಫ್ಯೂ ಇರುವುದಿಲ್ಲ. ಇಲ್ಲಿ ಯಾವಾಗಲೂ ದೀಪೋತ್ಸವ ಮತ್ತು ರಾಮೋತ್ಸವ ನಡೆಯುತ್ತದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.

ಅಯೋಧ್ಯೆಯಲ್ಲಿ (Ayodhya) ಶ್ರೀರಾಮನ ಪ್ರಾಣಪ್ರತಿಷ್ಠಾಪನೆ (Pran Pratishtha) ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಎಲ್ಲಿ ನಾವು ಮಂದಿರ ನಿರ್ಮಿಸಲು ಪಣ ತೊಟ್ಟಿದ್ದೆವೋ, ಅಲ್ಲಿಯೇ ಅದನ್ನು ನಿರ್ಮಿಸಲಾಗಿದೆ. ಇಲ್ಲಿ ಬಾಲರಾಮ ಪ್ರತಿಷ್ಠಾಪನೆಯು ರಾಮ ರಾಜ್ಯದ ಗುರುತಾಗಿದ್ದು, ಶ್ರೀರಾಮನ ನಾಮಸ್ಮರಣೆಯೇ ಸದಾ ಇಲ್ಲಿ ಮೊಳಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

500 ವರ್ಷಗಳ ಸುದೀರ್ಘವಾಗಿ ಕಾದು ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ. ಇದೊಂದು ದೇಶದ ಭಾವನಾತ್ಮಕ ಘಳಿಗೆಯಾಗಿದೆ. ಈ ಬಗ್ಗೆ ನನಗೆ ಮಾತಾಡಲು ಪದಗಳೇ ಸಿಗುತ್ತಿಲ್ಲ. ಪ್ರತಿಯೊಬ್ಬರೂ ಭಾವುಕರಾಗಿದ್ದು, ಎಲ್ಲರೂ ಸಂತುಷ್ಟರಾಗಿದ್ದಾರೆ. ಈ ದಿನ ದೇಶದ ಪ್ರತಿ ನಗರ ಮತ್ತು ಹಳ್ಳಿಯೂ ಅಯೋಧ್ಯೆಯಾಗಿ ಬದಲಾಗಿದೆ ಎಂದಿದ್ದಾರೆ.

ಇದೇ ವೇಳೆ ಅವರು ಬಾಬ್ರಿ ಮಸೀದಿ ಇದ್ದ ವಿವಾದಿತ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಲು ಈ ಹಿಂದೆ ನಡೆದ ಹೋರಾಟಗಳಲ್ಲಿ ಬಳಕೆಯಾದ ಮಂದಿರ್ ವಹಿ ಬನಾಯೇಂಗೆ ಘೋಷಣೆಯನ್ನು ಸ್ಮರಿಸಿಕೊಂಡಿದ್ದಾರೆ.

ಇಡೀ ದೇಶದೆಲ್ಲೆಡೆ ರಾಮನ ಮಾಯೆ ಆವರಿಸಿದೆ. ನಾವು ತ್ರೇತಾ ಯುಗಕ್ಕೆ ಕಾಲಿಟ್ಟಂತೆ ಭಾಸವಾಗುತ್ತಿದೆ. ಮಂದಿರದ ಕನಸು ನನಸಾಗಲು ಕಾರಣರಾದ ಪ್ರಧಾನಿ ಮೋದಿಗೆ ಧನ್ಯವಾದಗಳನ್ನು ಅವರು ಅರ್ಪಿಸಿದ್ದಾರೆ. ಇದನ್ನೂ ಓದಿ: ಮಂದಸ್ಮಿತ, ಮುಗ್ಧಮುಖದ ಬಾಲರಾಮನ ಕಣ್ತುಂಬಿಕೊಂಡು ಪುನೀತರಾದ ರಾಮಭಕ್ತರು

Share This Article