ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವಷ್ಟು ಶಕ್ತಿ ಯಾರಿಗೂ ಇಲ್ಲ: ಕೊತ್ತೂರು ಮಂಜುನಾಥ್

Public TV
1 Min Read

ಕೋಲಾರ: ಕಾಂಗ್ರೆಸ್ (Congress) ಸರ್ಕಾರವನ್ನು ಬೀಳಿಸುವಷ್ಟು ಶಕ್ತಿ ಯಾರಿಗೂ ಇಲ್ಲ. ನಾವು 136 ಜನ ಶಾಸಕರು ಇದ್ದೇವೆ. ಸರ್ಕಾರವನ್ನು ಬೀಳಿಸಲು ಯಾರ ಕೈಯಲ್ಲೂ ಆಗುವುದಿಲ್ಲ ಎಂದು ಶಾಸಕ ಕೊತ್ತೂರು ಮಂಜುನಾಥ್ (Kottur Manjunath)  ಹೇಳಿದ್ದಾರೆ.

ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಇರುವವರೆಗೂ ಯಾರಿಗೂ ಕದಲಿಸಲು ಆಗುವುದಿಲ್ಲ. ಅವಿರಿಬ್ಬರು ನಮಗೆ ಅಂತರಗಂಗೆ ಬೆಟ್ಟ ಇದ್ದಂತೆ. ಆ ಬೆಟ್ಟವನ್ನು ಕದಲಿಸಲು ಸಾಧ್ಯವಿಲ್ಲ. ಮಾತನಾಡಿಕೊಳ್ಳುವವರು ಮಾತನಾಡಿಕೊಳ್ಳಲಿ. ಸರ್ಕಾರ ಸುಭಿಕ್ಷವಾಗಿದೆ, ಚೆನ್ನಾಗಿದೆ, ಖುಷಿಯಾಗಿದೆ ಎಂದರು. ಇದನ್ನೂ ಓದಿ: ಸಿಂಗಾಪುರದಲ್ಲಿ ತಂತ್ರಗಾರಿಕೆ – ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಭೀತಿ?

ಬಿಕೆ ಹರಿಪ್ರಸಾದ್ (BK Hariprasad) ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಳೆ, ಗಾಳಿ ಹೇಳಿ ಬರುವುದಿಲ್ಲ. ಬಿಕೆ ಹರಿಪ್ರಸಾದ್ ಮಾತು ಈ ಮಾತಿಗೆ ಸಮ ಎಂದು ಲೇವಡಿ ಮಾಡಿದರು. ಇನ್ನು ರಮೇಶ್ ಕುಮಾರ್ (Ramesh Kumar) ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ವಿಚಾರದ ಕುರಿತು ಮಾತನಾಡಿದ ಅವರು, ರಮೇಶ್ ಕುಮಾರ್ ಅವರು ಕೋಲಾರದ ಹುಲಿ. ನಮ್ಮ ಜಿಲ್ಲೆಯ ಶಾಸಕರು ಯಾರೂ ಈ ರೀತಿ ಕೇಳಿಲ್ಲ. ಅವರಿಗೆ ಅಂತಹ ದರಿದ್ರ ಏನೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ವೇಲು ನಾಯ್ಕರ್ ಡಿಕೆಶಿ ಬಗ್ಗೆಯೂ ಹೇಳಿದ್ದ – ಹನಿಟ್ರ್ಯಾಪ್‌ ಆರೋಪಕ್ಕೆ ಮುನಿರತ್ನ ತಿರುಗೇಟು

ಅಧಿಕಾರಕ್ಕಾಗಿ ಕೈಚಾಚುವ ಪರಿಸ್ಥಿತಿ ಇಲ್ಲ. ಅವರ ಮನೆ ಬಾಗಿಲಿಗೆ ಬಂದಿದ್ದನ್ನ ಬೇಡ ಎಂದು ಹೇಳುವ ವ್ಯಕ್ತಿ ಅವರು. ವಿಸಿಲ್ ಹೊಡೆಯುವ ಟೈಮಲ್ಲಿ ಅವರಿಗೆ ಬೇಕಾದ ಪೋಸ್ಟ್ ಸಿಗುತ್ತೆ. ಅವರು ನ್ಯಾಯ, ನೀತಿ, ಧರ್ಮ ಎಂದು ಪಾಲನೆ ಮಾಡುವವರು. ಜನರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳುತ್ತಾರೆ. ಅವರಿಗೆ ಶಕ್ತಿಯಾಗಿ ನಾವು ಇರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಿಸಿದ ಸಿದ್ದರಾಮಯ್ಯ ಅಭಿಮಾನಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್