ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಲಿಲ್ಲ: ಉದಯ್‌ ಜೈನ್‌

By
1 Min Read

ಮಂಗಳೂರು: ವಿಶೇಷ ತನಿಖಾ ತಂಡದ ಪೊಲೀಸರು (SIT Police) ಸೌಜನ್ಯ (Soujanya Rape and Murder Case ) ವಿಚಾರವಾಗಿ ಯಾವುದೇ ಪ್ರಶ್ನೆ ಕೇಳಲಿಲ್ಲ ಉದಯ್‌ ಜೈನ್‌ ಹೇಳಿದ್ದಾರೆ.

ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸುಪ್ರೀಂ ಕೋರ್ಟ್‌ನಿಂದ ಖುಲಾಸೆಯಾಗಿರುವ ಉದಯ್‌ ಜೈನ್‌ (Uday Jain) ಅವರನ್ನು ಬುಧವಾರ ಎಸ್‌ಐಟಿ ಪೊಲೀಸರು ವಿಚಾರಣೆಗೆ ಕರೆಸಿದ್ದರು.

ಈ ಬಗ್ಗೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ಸಂಜೆ 5 ಗಂಟೆವರೆಗೆ ವಿಚಾರಣೆ ಮಾಡಿದರು. ವಿಚಾರಣೆ ವೇಳೆ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯೂಟ್ಯೂಬರ್‌ ಸಮೀರ್‌ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ

 

ವಿದ್ಯಾಭ್ಯಾಸ, ಉದ್ಯೋಗ, ಕುಟುಂಬ ಎಲ್ಲಾ ವಿಚಾರ ಮತ್ತು ಧರ್ಮಸ್ಥಳ ಸುತ್ತಾಮುತ್ತಾ ಹೆಣಗಳನ್ನು ಹೂತಿರುವ ಬಗ್ಗೆ ಪ್ರಶ್ನೆ ಕೇಳಿದರು. ಈ ವಿಚಾರ ಬಗ್ಗೆ ನನಗೆ ಏನು ಗೊತ್ತಿಲ್ಲ ಎಂದು ತಿಳಿಸಿದೆ. ಚಿನ್ನಯ್ಯನ ಬಗ್ಗೆ ಎಸ್‌ಐಟಿಯವರು ಏನು ಕೇಳಲಿಲ್ಲ ಎಂದು ಹೇಳಿದರು.

ಸೌಜನ್ಯ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ಮುಕ್ತಾಯವಾಗಿದೆ. ಹೊಸದಾಗಿ ಈ ಪ್ರಕರಣದ ವಿಚಾರಣೆ ನಡೆಸಬೇಕಾದರೆ ಸುಪ್ರೀಂನಿಂದ ಅನುಮತಿ ಪಡೆಯಬೇಕಾಗುತ್ತದೆ. ಇದನ್ನೂ ಓದಿಯೂಟ್ಯೂಬರ್‌ ಅಭಿಷೇಕ್‌ಗೆ SIT ಫುಲ್‌ ಗ್ರಿಲ್‌  ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದೆ ಅಂತ ತಪ್ಪೊಪ್ಪಿಗೆ

ಯಾವುದಾದರೂ ಪ್ರಬಲವಾದ ಸಾಕ್ಷ್ಯ ಸಿಕ್ಕಿ ಸೌಜನ್ಯ ತಾಯಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರೆ ಪ್ರಕರಣ ಮತ್ತೆ ತೆರೆಯುವ ಸಾಧ್ಯತೆಯಿದೆ.

Share This Article