ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿರುವುದು ಪ್ರಧಾನಿ, ರೆಡ್ಡಿ ವಿರುದ್ಧದ ಕೇಸ್ ವಜಾ ಗೊಳಿಸಿದ್ರಿ: ಟಿಡಿಪಿ ಸಂಸದ

Public TV
1 Min Read

ನವದೆಹಲಿ: ಗಾಲಿ ಜನಾರ್ದನ ರೆಡ್ಡಿ ಪ್ರಕರಣ ಮುಚ್ಚಿ ಹಾಕುವಲ್ಲಿ ಬಿಜೆಪಿ ಹೆಚ್ಚು ಕಾಳಜಿ ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟಿಡಿಪಿ ಸಂಸದ ಗಲ್ಲಾ ಜಯದೇವ್ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಕಲಾಪದಲ್ಲಿ ಬಿಜೆಪಿ ವಿರುದ್ಧ ಅವಿಶ್ವಾಸ ಮಂಡನೆಯಲ್ಲಿ ಮಾತನಾಡಿದ ಸಂಸದರು, ನಾನು ಭ್ರಷ್ಟಾಚಾರ ಮಾಡಲ್ಲ. ಬೇರೆಯವರಿಗೂ ಅವಕಾಶ ನೀಡುವುದಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದರು. ಆದರೆ ಪ್ರಧಾನಿಗಳೇ ಭ್ರಷ್ಟರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗಾಲಿ ಜನಾರ್ದನ ರೆಡ್ಡಿ ಆಂಧ್ರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಸಗಿದ್ದಾರೆ. ಅಷ್ಟೇ ಅಲ್ಲದೆ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಹಲವು ಪ್ರಕರಣಗಳು ದಾಖಲಾಗಿವೆ. ಆದರೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳನ್ನು ವಜಾಗೊಳಿಸಲಾಯಿತು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರಕ್ಕಾಗಿ ಜನಾರ್ದನ ರೆಡ್ಡಿಯನ್ನು ಬಳಸಿಕೊಳ್ಳಲಾಗಿದೆ. ನಿಮ್ಮ ಈ ನಡೆ ಭ್ರಷ್ಟಾಚಾರವನ್ನು ಬೆಂಬಲಿಸುವಂತಿದೆ. ದೇಶದ ಜನತೆ ಇದನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿದ್ದಾರೆ ಎಂದು ದೂರಿದರು.

 

Share This Article
Leave a Comment

Leave a Reply

Your email address will not be published. Required fields are marked *