ನಾಡದೇವತೆ ಚಾಮುಂಡಿ ತಾಯಿ ಇರುವ ಬೆಟ್ಟದಲ್ಲಿ ನೀರಿಗೆ ಹಾಹಾಕಾರ!

Public TV
1 Min Read

ಮೈಸೂರು: ನಾಡದೇವತೆ ಚಾಮುಂಡಿ ತಾಯಿ ಇರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ.

10 ದಿನಕ್ಕೆ ಒಮ್ಮೆ ಒಂದು ಗಂಟೆ ನೀರು ಬರುತ್ತೆ, ನಾವು ಹೇಗೆ ಇಲ್ಲಿ ಜೀವನ ಮಾಡಬೇಕು ಹೇಳಿ ಎಂದು ಚಾಮುಂಡಿ ಬೆಟ್ಟದ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡಗೆ ಪ್ರಶ್ನಿಸಿದಾಗ ಸಚಿವರು ತಬ್ಬಿಬ್ಬಾಗಿದ್ದಾರೆ.

ಬೆಟ್ಟದ ಸಮಸ್ಯೆ ಪರಿಶೀಲನೆಗೆ ಸಚಿವರು ತೆರಳಿದ್ದಾಗ ಮಹಿಳೆ ಬೆಟ್ಟದಲ್ಲಿನ ನೀರಿನ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಅತೀ ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸಚಿವ ಜಿಟಿಡಿ ಸೂಚಿಸಿದ್ದಾರೆ.

ಇದೇ ವೇಳೆ ಚಾಮುಂಡಿ ಬೆಟ್ಟದಲ್ಲಿ ಶುಚಿತ್ವ ಕಾಪಾಡುವಂತೆ ಅಧಿಕಾರಿಗಳಿಗೆ ಸಚಿವ ಜಿ.ಟಿ ದೇವೇಗೌಡರು ಸೂಚಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *