ರಾಹುಲ್ ಗಾಂಧಿ ಪ್ರಧಾನಿ ಆಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಸಿಎಂ

Public TV
1 Min Read

ನವದೆಹಲಿ: ರಾಹುಲ್ ಗಾಂಧಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಅಖಿಲ ಭಾರತೀಯ ಕಾಂಗ್ರೆಸ್ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.

ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಧಿವೇಶನದಲ್ಲಿ ಮಾತನಾಡಿದ ಸಿಎಂ, ರಾಹುಲ್ ಯುವಕರು, ದೂರದೃಷ್ಟಿಯುಳ್ಳವರು. ಮೇಲಾಗಿ ರಾಹುಲ್ ಗಾಂಧಿ ಪ್ರಜಾಪ್ರಭುತ್ವವಾದಿ. ಅವರು ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ರು.

ನಮ್ಮದು ನುಡಿದಂತೆ ನಡೆದ ಸರ್ಕಾರ. ಅನ್ನಭಾಗ್ಯ ಯೋಜನೆ ಜನರ ಬಳಿ ತಲುಪಿದೆ. ಯೋಜನೆ ಮೂಲಕ ಹಸಿವು ಮುಕ್ತ ರಾಜ್ಯ ಮಾಡುತ್ತಿದ್ದೇವೆ. ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನಮ್ಮದು ಕರ್ನಾಟಕ ಮಾಡೆಲ್ ಸರ್ಕಾರ ಎಂದರು.

ಬೇರೆಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತಿದ್ರೆ ನಾವು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಜಾರಿಗೆ ತಂದಿದ್ದೇವೆ. ಲೋಕಸಭಾ ಚುನಾವಣೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ದಿಕ್ಸೂಚಿಯಾಗಲಿದೆ ಅಂತ ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *