ಕಲ್ಯಾಣ ಮಂಟಪಕ್ಕೆ ಜೀನ್ಸ್ ಪ್ಯಾಂಟ್ ಹಾಕ್ಕೊಂಡು ಬಂದ ಹುಡ್ಗಿಯನ್ನ ಯಾರಾದ್ರು ಮದ್ವೆ ಆಗ್ತಾರಾ: ಕೇಂದ್ರ ಸಚಿವ

Public TV
1 Min Read

ಲಕ್ನೋ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹೆಣ್ಣು ಮಕ್ಕಳ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಮದುವೆ ಮಂಟಪಕ್ಕೆ ಹೆಣ್ಣುಮಕ್ಕಳು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದಲ್ಲಿ ಯಾವ ಹುಡುಗನೂ ಆಕೆಯನ್ನು ಮದುವೆಯಾಗಲು ಒಪ್ಪಲ್ಲ ಅಂತ ಹೇಳಿದ್ದಾರೆ.

ಗೊರಖ್ ಪುರದ ಮಹರಾಣಾ ಪ್ರತಾಪ್ ಶಿಕ್ಷಾ ಪರಿಷದ್ ನಲ್ಲಿ ನಡೆದ ಸ್ಥಾಪನಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಸಚಿವರು ಈ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ಭಾಷಣದ ವೇಳೆ ಭಾರತೀಯ ಸಂಸ್ಕೃತಿಗೆ ಹೆಚ್ಚಿನ ಮಹತ್ವ ನೀಡುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿನ ಲೆಹೆಂಗಾ ಬದಲು ಶಾರ್ಟ್ಸ್ ತೊಟ್ಟ ವಧು- ಫೋಟೋ ವೈರಲ್

ಯಾರಾದರೂ ದೇವಾಲಯದ ಪೂಜಾರಿಗೆ ಪ್ಯಾಂಟ್ ಧರಿಸಿ ಪೂಜೆ ಮಾಡು ಎಂದರೆ ಜನರು ಆತನನ್ನು ಹೇಗೆ ಪೂಜಾರಿಯಾಗಿ ನೋಡುವುದಿಲ್ಲವೋ ಅದೇ ರೀತಿಯಾಗಿ ಮದುವೆ ಮಂಟಪಕ್ಕೆ ಜೀನ್ಸ್ ಧರಿಸಿ ಹುಡುಗಿ ಬಂದರೆ ಯಾಕೆಯನ್ನು ಮದುವೆಯಾಗಲು ಯಾರಾದರೂ ಮುಂದೆ ಬರುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಸಚಿವರು ಈ ಹೇಳಿಕೆ ನೀಡಿದ ಸಂದರ್ಭದಲ್ಲಿ ವೇದಿಕೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *