ತಮಿಳು ಸಿನಿಮಾ ಮಾಡುತ್ತಿಲ್ಲ: ಗಾಬರಿ ಹುಟ್ಟುವಂತೆ ಹೇಳಿದ ರಕ್ಷಿತ್ ಶೆಟ್ಟಿ

Public TV
2 Min Read

ಮಿಳಿನ ಹೆಸರಾಂತ ನಟ ದಳಪತಿ ವಿಜಯ್ (Dalpati Vijay) ಜೊತೆ ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಮಾಡಲಿದ್ದಾರೆ ಎನ್ನುವ ವಿಚಾರ ಹಲವು ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಲೇ ಇತ್ತು. ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಮಾತ್ರವಲ್ಲ, ಬಾಲಿವುಡ್ ನಿಂದ ಸಂಜಯ್ ದತ್, ತಮಿಳಿನ ಮತ್ತೋರ್ವ ಹೆಸರಾಂತ ನಟ ಕಮಲ್ ಹಾಸನ್ ಕೂಡ ಇರಲಿದ್ದಾರೆ ಎನ್ನುವುದು ಭಾರೀ ಸುದ್ದಿಗೆ ಕಾರಣವೂ ಆಗಿತ್ತು. ತಮಿಳು ಮತ್ತು ಕನ್ನಡ ಸಿನಿಮಾ ರಂಗದಲ್ಲಿ ಅಷ್ಟೊಂದು ಸುದ್ದಿಯಾದರೂ, ರಕ್ಷಿತ್ ಈವರೆಗೂ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾ ಮೂಲಕ ಇದಕ್ಕೊಂದು ಉತ್ತರ ನೀಡಿದ್ದಾರೆ.

‘ದಳಪತಿ ವಿಜಯ್ ಜೊತೆ ನಾನು ಸಿನಿಮಾ ಮಾಡುತ್ತಿಲ್ಲ’ ಎನ್ನುವ ವಿಚಾರವನ್ನು ಸಿಂಪಲ್ ಆಗಿ ಹೇಳದೇ ಭಯ ಹುಟ್ಟುವ ರೀತಿಯಲ್ಲಿ ಅವರು ಬರೆದುಕೊಂಡಿದ್ದಾರೆ. ನಾಲ್ಕು ಪ್ರಾಜೆಕ್ಟ್ ಕಾರಣದಿಂದಾಗಿ ತಮಗೆ ನಿದ್ದೆಯೇ ಬರುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಆತಂಕ ಮೂಡುವಂತೆ ಮಾಡಿದ್ದಾರೆ. ‘ಸಿನಿಮಾಗಳು ಯಾವಾಗಲೂ ಇದ್ದದ್ದೆ, ಆರೋಗ್ಯ ನೋಡಿಕೊಳ್ಳಿ. ಚೆನ್ನಾಗಿ ಮಲಗಿ’ ಎಂದು ಅಭಿಮಾನಿಗಳು ಹೇಳುವಂತೆ  ಅಷ್ಟುದ್ದ ಸಿನಿಮಾ ಯಾದಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಮಗುವಾದ ಬಳಿಕ ಮಾಲಿವುಡ್‌ನತ್ತ ಪ್ರಣಿತಾ ಸುಭಾಷ್

ರಕ್ಷಿತ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಂತೆ ಸದ್ಯ, ಸಪ್ತ ಸಾಗರದಾಚೆ ಎಲ್ಲೊ (SSE)ಸಿನಿಮಾ ಕೆಲಸ ಮುಗಿಸಬೇಕಿದೆ. ಅದು ತೆರೆಗೆ ಬರಬೇಕಿದೆ. ನಂತರ ರಿಚರ್ಡ್ ಆಂಟನಿ (RA) (Richard Antony), ಆನಂತರ ಪುಣ್ಯಕೋಟಿ (Punyakoti) ಪಾರ್ಟ್ 1 ಮತ್ತು ಪಾರ್ಟ್ 2 (PK 1 And 2) ಇದು ಮುಗಿದ ಮೇಲೆ ಮಿಡ್‍ ವೇ ಟು ಮೋಕ್ಷ (M2M) ಸಿನಿಮಾ ಮಾಡಬೇಕಿದೆಯಂತೆ. ಈ ನಾಲ್ಕು ಸಿನಿಮಾಗಳ ಮಧ್ಯೆ ಬೇರೆ ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂದು ಹೇಳುವ ಮೂಲಕ ತಮಿಳು ಸಿನಿಮಾವನ್ನು ನಿರಾಕರಿಸಿದ್ದಾರೆ.

ಅಷ್ಟೇ ಅಲ್ಲದೇ ಕಿರಿಕ್ ಪಾರ್ಟಿ 2 (KP2) (Kirik Part 2) ಸಿನಿಮಾದ ಬಗ್ಗೆಯೂ ಅವರು ಹಿಂಟ್ ಕೊಟ್ಟಿದ್ದು. ಕಿರಿಕ್ ಪಾರ್ಟಿ 2 ಸಿನಿಮಾದ ಬಗ್ಗೆ ವಿಭಿನ್ನ ಪ್ಲ್ಯಾನ್ ಹೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸುದ್ದಿ ಏನೇ ಹರಿದಾಡಿದರೂ ಅದೆಲ್ಲವೂ ಎಂದಿಗೂ ನಿಜವಾಗುವುದಿಲ್ಲ ಎಂದು ಹೇಳುವ ಮೂಲಕ ದಳಪತಿ ವಿಜಯ್ ಜೊತೆಗಿನ ಸಿನಿಮಾದ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *