ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

Public TV
1 Min Read

ಹಾಸನ: ಕಾಂಗ್ರೆಸ್‌ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ.

ಬಜೆಟ್‌ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಇದನ್ನೂ ಓದಿ: ಲೋಕಸಮರಕ್ಕಾಗಿ BJP- JDS ದೋಸ್ತಿ- NDA ಸಭೆಯಲ್ಲಿ ಭಾಗಿಯಾಗ್ತಾರಾ ಹೆಚ್‍ಡಿಕೆ?

ಬಿಜೆಪಿ ವಿರುದ್ಧ ವಾಗ್ದಾಳಿ:
ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ ಆಯ್ಕೆ ಮಾಡದಿರುವುದು ವಿಪರ್ಯಾಸ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾವು ಹೇಳಿದ ಮಾತನ್ನು ನಿಜ ಮಾಡಲು HDK ಹೊರಟಿದ್ದಾರೆ: ದಿನೇಶ್ ಗುಂಡೂರಾವ್

ಬಿಜೆಪಿಯಲ್ಲಿ ಆಂತರಿಕವಾಗಿಯೇ ಗೊಂದಲಗಳು ಏರ್ಪಟ್ಟಿವೆ. ಅವರೆಲ್ಲ ಕಾಂಗ್ರೆಸ್‌ ಮುಕ್ತ ಭಾರತ ಮಾಡ್ತೀವಿ ಅಂತಾ ಹೇಳಿದ್ದರು. ಆದ್ರೆ ನಾವು ಬಿಜೆಪಿ ಮುಕ್ತ ಭಾರತ ಮಾಡ್ತೀವಿ ಅಂತ ಹೇಳೋದಿಲ್ಲ. ಆದ್ರೆ ಬಿಜೆಪಿ ಪಕ್ಷಕ್ಕೆ ಈ ರಾಜ್ಯದಲ್ಲಿ ಭವಿಷ್ಯ ಇಲ್ಲ ಅನ್ನೋದನ್ನ ಹೇಳಬಲ್ಲೆ ಎಂದು ತಿವಿದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್